22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

ವೇಣೂರು:ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ದಾಸ್ತಾನು ಹಾಗೂ ಮಾರಾಟ ಮಾಡುತ್ತಿದ್ದ ಗುಂಡೂರಿ ಅಂಗಡಿ ಮಾಲೀಕನನ್ನು ವೇಣೂರು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡ ಬಗ್ಗೆ ಜೂ. 20 ರಂದು ವರದಿಯಾಗಿದೆ.

ಪೋಲೀಸರು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ ಬಜಿರೆ ಎಂಬಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ತಾಲೂಕು ಗುಂಡೂರಿ ಗ್ರಾಮದ ಗುಂಡೂರಿ ಬಳಿ ಇರುವ ದಿನಸಿ ಅಂಗಡಿಯಲ್ಲಿ ಹರೀಶ್‌ ಎಂಬಾತನು ಅಕ್ರಮವಾಗಿ ಮದ್ಯವನ್ನು ದಾಸ್ತಾನು ಇರಿಸಿ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಪೋಲಿಸರು ಗೆ ದಾಳಿ ನಡೆಸಿ ಅಂಗಡಿಯಲ್ಲಿದ್ದ ಒಂದು ಪ್ಲಾಸ್ಟಿಕ್‌ ಚೀಲದಲ್ಲಿ 90 ML ಸಾಮರ್ಥ್ಯದ 44 ಮದ್ಯ ತುಂಬಿದ ಸ್ಯಾಚೆಟ್‌ಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ.

ಪತ್ತೆ ಹಚ್ಚಲಾದ ಮದ್ಯದ ಒಟ್ಟು ಪ್ರಮಾಣ 3.960 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ 1760/- ಆಗಿರುತ್ತದೆ. ಈ ಬಗ್ಗೆ ವೇಣೂರು ಪೋಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!