23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿವರದಿ

ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ರೂ.3.20 ಲಕ್ಷ ವಂಚನೆ ಆರೋಪ ಬೆಂಗಳೂರಿನ ಮಹಿಳೆ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರು ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ಪ್ರಕರಣವೊಂದನ್ನು ಬಗೆ ಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡಂತ್ಯಾರ್‌ನ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಈ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್ಟುಕ್ ಮೂಲಕ ಪರಿಚಯವಾಗಿದ್ದಾಳೆ. ತಾನು ನೊಂದವರ ಹಾಗೂ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಎಂದು ರಾಜೇಶ್ ಅವರಿಗೆ ನಂಬಿಸಿದ್ದಾಳೆ.

ಆಗ, ರಾಜೇಶ್ ಅವರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್‌ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಇದನ್ನು ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್ ಅವರು ಸಂಧ್ಯಾಗೆ ಪ್ರಶ್ನಿಸಿದ್ದಾರೆ.ಆಗ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಹೇಳಿದ್ದಾರೆ .ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್ ಅವರು ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಎನ್‌ಎಸ್‌ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!