ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

ಅಳದಂಗಡಿ : ಶ್ರೀ, ಕ್ಷೇ, ಧ, ಗ್ರಾ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಸ, ಹಿ, ಪ್ರಾ, ಶಾಲೆ ಬಡಗಕಾರಂದೂರು ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮವನ್ನು ಅರಣ್ಯಾಧಿಕಾರಿ ಹರಿಪ್ರಸಾದ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಲಾಖೆಯಿಂದ ಸಿಗುವ ಗಿಡಗಳನ್ನು ಉತ್ತಮ ರೀತಿಯಲ್ಲಿ ರಕ್ಷಿಸಿ ಬೆಳೆಸಬೇಕು ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಪ್ಲಾಸ್ಟಿಕ್ ನಿಂದ ಪರಿಸರಕ್ಕೆ ಆಗುವ ತೊಂದರೆಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಶಿಕ್ಷಕಿಯಾದ ಶಾಂತಿ ನಾಯಕ್ ರವರು ಮಾತನಾಡಿ ಅರಣ್ಯ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಾಗಲು ಕಾರಣವಾಗುತ್ತಿದೆ ಹಲವು ಅಪರೂಪದ ಸಸ್ಯ ಹಾಗೂ ಪ್ರಾಣಿ ಸಂಕುಲಗಳು ಅಳಿವಿನಂಚಿಗೆ ಬಂದಿದೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಬರುವ ದಿನಗಳಲ್ಲಿ ಎಲ್ಲೆಡೆ ಹಸಿರುಮಯವಾಗುತ್ತದೆ ಹಾಗೂ ಪರಿಸರಮಾಲಿನ್ಯದಿಂದ ಉಂಟಾಗುವ ಸಮಸ್ಯೆ, ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಮಾತನಾಡಿ ನಮ್ಮ ಪೂರ್ವಜರು ನಮಗೆ ಉಳಿಸಿಟ್ಟಿರುವ ಅರಣ್ಯವನ್ನು ಮನುಷ್ಯ ತಮ್ಮ ಅಭಿವೃದ್ಧಿ ಕೆಲಸಕಾರ್ಯಗಳಿಗೆ ನಾಶ ಮಾಡುವ ಮೂಲಕ ಪರಿಸರದ ಅವನತಿಗೆ ಕಾರಣವಾಗುತ್ತಿದ್ದೇವೆ ನೈಸರ್ಗಿಕ ಸಂಪನ್ಮೂಲಗಳು ಖಾಲಿ ಮಾಡುವ ಮುನ್ನ ಅದರ ಎರಡರಷ್ಟು ಬೆಳವಣಿಗೆ ಮಾಡಬೇಕೆಂದು ಮಾಹಿತಿ ನೀಡಿದರು.

ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯನ್ ರವರು ಗಿಡ ನಾಟಿ ಮಾಡುವ ಮೂಲಕ ನಾಟಿಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರು ಕೃಷ್ಣ ವಲಯದ ಮೇಲ್ವಿಚಾರಕಿ ಶ್ರೀಮತಿ ಯಶೋಧ, ಎ ಹಾಗೂ ಬಿ ಒಕ್ಕೂಟದ ಮಾಜಿ ಅಧ್ಯಕ್ಷ ಹರೀಶ್ ಆಚಾರ್ಯ, ಮಂಜುನಾಥ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಒಕ್ಕೂಟದ ಕಾರ್ಯದರ್ಶಿಯಾದ ಶ್ರೀನಿವಾಸ್ ಆಚಾರ್ಯ ಹಾಗೂ ಸದಾನಂದ ಸೇವಾ ಪ್ರತಿನಿಧಿ ಪೂರ್ಣಿಮಾ ಪ್ರಮೋದ, ಶುಭಲತಾ ವಿಪತ್ತು ತಂಡದ ಸಂಯೋಜಕಿ ಹರಿಣಾಕ್ಷಿ, ಸದಸ್ಯರಾದ ಶಕುಂತಲಾ, ಹೇಮಾವತಿ, ನಮಿತಾ, ಅಮಿತ್ ರವರು ಗಿಡ ನಾಟಿ ಮಾಡಿದರು. ಶಾಲಾ ಶಿಕ್ಷಕರು ಪ್ರಗತಿ ಬಂಧು ತಂಡದ ಸದಸ್ಯರು ಜಗನ್ನಾಥ ಹಾಗೂ ಊರಿನ ಗಣ್ಯರು ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya
error: Content is protected !!