ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಮಂಡಲ ಕಾರ್ಯಕಾರಣಿ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ ಜೂ. 21ರಂದು ಲಾಯಿಲ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಬೋಟ್ಯಾಡಿ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮರೋಡಿ, ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆಳ್ವ, ಪ್ರೇಮನಾಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು, ಕಾರ್ಯದರ್ಶಿ ವಸಂತಿ ಮಚ್ಚಿನ , ಜಿಲ್ಲಾ ಉಪಾಧ್ಯಕ್ಷರಾದ ಹರೀಶ್ ಮತ್ತು ರಾಕೇಶ್ ರೈ ಹಾಗೂ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು ವಂದೇ ಮಾತರಂ ಗೀತೆ ಹಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಸ್ವಾಗತಿಸಿ, ಪ್ರಶಾಂತ್ ಪಾರೆಂಕಿ ವಂದಿಸಿದರು. ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಅರವಿಂದ್ ಲಾಯಿಲ ನಿರೂಪಿಸಿದರು.











