27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

ಬೆಳ್ತಂಗಡಿ : ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಬೆಳ್ತಂಗಡಿ ಇಲ್ಲಿ ಜೂ.21ರಂದು ಸಂಭ್ರಮ ಶನಿವಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನಗರ ಪುನರ್ವಸತಿ ಕಾರ್ಯಕರ್ತೆಯಾಗಿರುವ ಸ್ಟಾರ್ ವ್ಯುಮೆನ್ ಪ್ರಶಸ್ತಿ ಪಡೆದ ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಫೌಝಿಯಾ ರವರು ವಿಶೇಷ ಚೇತನರ ಸಂವಾದ ಕಾರ್ಯಕ್ರಮ ನಡೆಸಿದರು.

ಇವರು ವಿಶೇಷ ಚೇತನ ಮಕ್ಕಳಿಗೆ ಸರ್ಕಾರ ಸಿಗುವ ಸೌಲಭ್ಯಗಳ ಬಗ್ಗೆ ಮಕ್ಕಳೊಂದಿಗೆ ಸಂವಹನ ನಡೆಸಿದರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಿಠಲ ಬಿ ಮತ್ತು ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯೊಂದಿಗೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಅವರು ತಾವು ತನ್ನ ವೈಕಲ್ಯತೆಯಿಂದ ನೋವು ಹಾಗೂ ಸಮಾಜವನ್ನು ಎದುರಿಸಿದ ರೀತಿಯನ್ನು ವಿವರವಾಗಿ ದೃಷ್ಟಾಂತದ ಮೂಲಕ ತಿಳಿಸಿದರು. ಲಕ್ಷ್ಮಿಕಾಂತ್ ಬೇಕಲ್ ಎಸ್ ಸ್ವಾಗತಿಸಿ, ಜ್ಯೋತಿ ಧನ್ಯವಾದವಿತ್ತರು.

Related posts

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
error: Content is protected !!