September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

ಬೆಳ್ತಂಗಡಿ : ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಬೆಳ್ತಂಗಡಿ ಇಲ್ಲಿ ಜೂ.21ರಂದು ಸಂಭ್ರಮ ಶನಿವಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನಗರ ಪುನರ್ವಸತಿ ಕಾರ್ಯಕರ್ತೆಯಾಗಿರುವ ಸ್ಟಾರ್ ವ್ಯುಮೆನ್ ಪ್ರಶಸ್ತಿ ಪಡೆದ ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಫೌಝಿಯಾ ರವರು ವಿಶೇಷ ಚೇತನರ ಸಂವಾದ ಕಾರ್ಯಕ್ರಮ ನಡೆಸಿದರು.

ಇವರು ವಿಶೇಷ ಚೇತನ ಮಕ್ಕಳಿಗೆ ಸರ್ಕಾರ ಸಿಗುವ ಸೌಲಭ್ಯಗಳ ಬಗ್ಗೆ ಮಕ್ಕಳೊಂದಿಗೆ ಸಂವಹನ ನಡೆಸಿದರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಿಠಲ ಬಿ ಮತ್ತು ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯೊಂದಿಗೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಅವರು ತಾವು ತನ್ನ ವೈಕಲ್ಯತೆಯಿಂದ ನೋವು ಹಾಗೂ ಸಮಾಜವನ್ನು ಎದುರಿಸಿದ ರೀತಿಯನ್ನು ವಿವರವಾಗಿ ದೃಷ್ಟಾಂತದ ಮೂಲಕ ತಿಳಿಸಿದರು. ಲಕ್ಷ್ಮಿಕಾಂತ್ ಬೇಕಲ್ ಎಸ್ ಸ್ವಾಗತಿಸಿ, ಜ್ಯೋತಿ ಧನ್ಯವಾದವಿತ್ತರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya
error: Content is protected !!