22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿಸಲ್ಪಟ್ಟ ರಿಕ್ಷಾ ಚಾಲಕ ಮಾಲಕರ ಸಂಘ ಬೆಳ್ತಂಗಡಿ ಇದರ ಚಾಲಕರ ಆಪತ್ಕಾಲದ ಸಹಾಯಧನ ನೀಡಲು ಅಂಗೀಕರಿಸಿದ ಕ್ಷೇಮನಿಧಿ ಯೋಜನೆಯ ವತಿಯಿಂದ ಪೆರಾಡಿ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ದಿನೇಶ್ ಪೆರಾಡಿ ಇವರು ರಿಕ್ಷಾ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಸ್ತುತ ಮನೆಯಲ್ಲೇ ವಿಶ್ರಾಂತಿಯಲ್ಲಿರುವ ಕಾರಣ ಇವರಿಗೆ ಕ್ಷೇಮನಿಧಿಯ ಆಪತ್ಕಾಲದ 27ನೇ ಸಹಾಯಧನವಾಗಿ ರೂ. 5000 ಮೊತ್ತವನ್ನು ನೀಡಿ ಇವರ ಚಿಕಿತ್ಸೆಗೆ ಸಹಕರಿಸಲಾಯಿತು.

ಈ ಸಂದರ್ಭದಲ್ಲಿ ಬಿಎಂಎಸ್ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಪೆರಾಡಿ ಹಾಗೂ ಪೆರಾಡಿ ರಿಕ್ಷಾ ಚಾಲಕ ಸಂಘದ ಸದಸ್ಯರಾದ ಸದಾಶಿವ ಕುಲಾಲ್, ಹರೀಶ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!