July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ, ಎನ್ ಸಿ ಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ ನೆರವೇರಿಸಿ ಉತ್ತಮ ಶರೀರ, ಮನಸ್ಸು ನಿರ್ಮಾಣವಾಗಬೇಕಾದರೆ ಯೋಗ ಅತಿ ಮುಖ್ಯ. ಇಂದಿನ ಒತ್ತಡ ಪ್ರೇರಿತ ಜೀವನಕ್ಕೆ ಯೋಗ ಅತಿ ಅವಶ್ಯಕ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್ ಇವರು ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಯೋಗ ದಿನಾಚರಣೆಯ ಸಂದೇಶವಾದ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗಾಸನ ಎಂಬುದನ್ನು ತಿಳಿಸಿ, ಯೋಗಾಸನದಿಂದ ಮನುಷ್ಯನಲ್ಲಿ ದೇಹ, ಮನಸ್ಸು ಮತ್ತು ಆತ್ಮಗಳ ಸಮತೋಲನವನ್ನು ಕಾಪಾಡಲು ಸಾಧ್ಯ ಎಂದು ತಿಳಿಸಿದರು.

ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆತೆಯನ್ನು ಮಾಡಿದರು. ದ್ವಿತೀಯ ಎಂಕಾಂ ನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ರೇಂಜರ್ ಅಧಿಕಾರಿ ಪ್ರೊ. ರಾಜೇಶ್ವರಿ ಹೆಚ್. ಎಸ್., ಗ್ರಂಥಪಾಲಕರಾದ ಜಗದೀಶ್, ಕನ್ನಡ ಪ್ರಾಧ್ಯಾಪಕರಾದ ಪ್ರೊ. ಸುಧಾರಾಣಿ, ಶ್ರೀಮತಿ ಸುನೀತಾ ಹಾಗೂ ಕಚೇರಿ ಅಧ್ಯಕ್ಷೆ ಶ್ರೀಮತಿ ದಿವ್ಯ ಮೋಹನ್ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರ ಜೊತೆಗೆ ಕಚೇರಿ ಸಿಬ್ಬಂದಿಗಳಾದ ಶ್ರೀಮತಿ ಪ್ರಣಮ್ಯ ಜೈನ್ ಶ್ರೀಮತಿ ಸಂಧ್ಯಾ ಹಾಗೂ ಅರವಿಂದ್ ಯೋಗಾಸನದ ಪ್ರಾತ್ಯಕ್ಷಿತೆಯಲ್ಲಿ ಭಾಗವಹಿಸಿದರು.

Related posts

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya
error: Content is protected !!