September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ, ಎನ್ ಸಿ ಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ ನೆರವೇರಿಸಿ ಉತ್ತಮ ಶರೀರ, ಮನಸ್ಸು ನಿರ್ಮಾಣವಾಗಬೇಕಾದರೆ ಯೋಗ ಅತಿ ಮುಖ್ಯ. ಇಂದಿನ ಒತ್ತಡ ಪ್ರೇರಿತ ಜೀವನಕ್ಕೆ ಯೋಗ ಅತಿ ಅವಶ್ಯಕ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್ ಇವರು ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಯೋಗ ದಿನಾಚರಣೆಯ ಸಂದೇಶವಾದ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗಾಸನ ಎಂಬುದನ್ನು ತಿಳಿಸಿ, ಯೋಗಾಸನದಿಂದ ಮನುಷ್ಯನಲ್ಲಿ ದೇಹ, ಮನಸ್ಸು ಮತ್ತು ಆತ್ಮಗಳ ಸಮತೋಲನವನ್ನು ಕಾಪಾಡಲು ಸಾಧ್ಯ ಎಂದು ತಿಳಿಸಿದರು.

ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆತೆಯನ್ನು ಮಾಡಿದರು. ದ್ವಿತೀಯ ಎಂಕಾಂ ನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ರೇಂಜರ್ ಅಧಿಕಾರಿ ಪ್ರೊ. ರಾಜೇಶ್ವರಿ ಹೆಚ್. ಎಸ್., ಗ್ರಂಥಪಾಲಕರಾದ ಜಗದೀಶ್, ಕನ್ನಡ ಪ್ರಾಧ್ಯಾಪಕರಾದ ಪ್ರೊ. ಸುಧಾರಾಣಿ, ಶ್ರೀಮತಿ ಸುನೀತಾ ಹಾಗೂ ಕಚೇರಿ ಅಧ್ಯಕ್ಷೆ ಶ್ರೀಮತಿ ದಿವ್ಯ ಮೋಹನ್ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರ ಜೊತೆಗೆ ಕಚೇರಿ ಸಿಬ್ಬಂದಿಗಳಾದ ಶ್ರೀಮತಿ ಪ್ರಣಮ್ಯ ಜೈನ್ ಶ್ರೀಮತಿ ಸಂಧ್ಯಾ ಹಾಗೂ ಅರವಿಂದ್ ಯೋಗಾಸನದ ಪ್ರಾತ್ಯಕ್ಷಿತೆಯಲ್ಲಿ ಭಾಗವಹಿಸಿದರು.

Related posts

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!