37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಭೇಟಿ ನೀಡಿದರು.
ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ರಕ್ತ ಪರೀಕ್ಷಾ ಕೇಂದ್ರ, ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ವೈದ್ಯಾಧಿಕಾರಿ ಡಾ.ರಮೇಶ್ ರವರನ್ನು ಬೇಟಿ ಮಾಡಿ ತಾಲೂಕಿನಾಧ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಮುಂಜಾಗೃತಾ ಕ್ರಮವಹಿಸುವಂತೆ ತಿಳಿಸಿದರು. ತಾಲೂಕಿನಲ್ಲಿ 19 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು. ರೋಗಿಗಳಿಗೆ ನೀಡಲು ಔಷದ ಕೊರತೆಯ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಕೊರತೆ ಇಲ್ಲ ಹೆಚ್ಚುವರಿಯಾಗಿ ತರಿಸಿದ್ದೇವೆ ಎಂದು ತಿಳಿಸಿದರು.ಇತ್ತೀಚೆಗೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ವೈದ್ಯರು ನಿರ್ಲಕ್ಷ್ಯ ವಹಿಸಿದ ಬಗ್ಗೆ ವಿವರಣೆ ಪಡೆದುಕೊಂಡರು.

ಭೇಟಿಯಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ಪಿ.ಟಿ. ಕಳೆಂಜ, ನವೀನ್ ಗೌಡ ಸವಣಾಲು, ವೀರೇಂದ್ರ ಕುಮಾರ್ ಅಳದಂಗಡಿ, ರಶೀದ್ ಕಕ್ಕಿಂಜೆ, ವೆಂಕಣ್ಣ ಕೊಯ್ಯೂರು, ಸ್ಟೀವನ್ ಮೋನಿಸ್ ನಿಟ್ಟಡೆ, ಶ್ರೀಮತಿ ಸವಿತಾ ಸುಲ್ಕೇರಿ, ಹಾಗೂ ಯುವ ಕಾಂಗ್ರೆಸ್ ನ ವಿನಯ್ ಕುಮಾರ್ ಹಾಜರಿದ್ದರು.

Related posts

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!