22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಭೇಟಿ ನೀಡಿದರು.
ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ರಕ್ತ ಪರೀಕ್ಷಾ ಕೇಂದ್ರ, ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ವೈದ್ಯಾಧಿಕಾರಿ ಡಾ.ರಮೇಶ್ ರವರನ್ನು ಬೇಟಿ ಮಾಡಿ ತಾಲೂಕಿನಾಧ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಮುಂಜಾಗೃತಾ ಕ್ರಮವಹಿಸುವಂತೆ ತಿಳಿಸಿದರು. ತಾಲೂಕಿನಲ್ಲಿ 19 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು. ರೋಗಿಗಳಿಗೆ ನೀಡಲು ಔಷದ ಕೊರತೆಯ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಕೊರತೆ ಇಲ್ಲ ಹೆಚ್ಚುವರಿಯಾಗಿ ತರಿಸಿದ್ದೇವೆ ಎಂದು ತಿಳಿಸಿದರು.ಇತ್ತೀಚೆಗೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ವೈದ್ಯರು ನಿರ್ಲಕ್ಷ್ಯ ವಹಿಸಿದ ಬಗ್ಗೆ ವಿವರಣೆ ಪಡೆದುಕೊಂಡರು.

ಭೇಟಿಯಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ಪಿ.ಟಿ. ಕಳೆಂಜ, ನವೀನ್ ಗೌಡ ಸವಣಾಲು, ವೀರೇಂದ್ರ ಕುಮಾರ್ ಅಳದಂಗಡಿ, ರಶೀದ್ ಕಕ್ಕಿಂಜೆ, ವೆಂಕಣ್ಣ ಕೊಯ್ಯೂರು, ಸ್ಟೀವನ್ ಮೋನಿಸ್ ನಿಟ್ಟಡೆ, ಶ್ರೀಮತಿ ಸವಿತಾ ಸುಲ್ಕೇರಿ, ಹಾಗೂ ಯುವ ಕಾಂಗ್ರೆಸ್ ನ ವಿನಯ್ ಕುಮಾರ್ ಹಾಜರಿದ್ದರು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya
error: Content is protected !!