25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಭೇಟಿ ನೀಡಿದರು.
ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ರಕ್ತ ಪರೀಕ್ಷಾ ಕೇಂದ್ರ, ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ವೈದ್ಯಾಧಿಕಾರಿ ಡಾ.ರಮೇಶ್ ರವರನ್ನು ಬೇಟಿ ಮಾಡಿ ತಾಲೂಕಿನಾಧ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಮುಂಜಾಗೃತಾ ಕ್ರಮವಹಿಸುವಂತೆ ತಿಳಿಸಿದರು. ತಾಲೂಕಿನಲ್ಲಿ 19 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು. ರೋಗಿಗಳಿಗೆ ನೀಡಲು ಔಷದ ಕೊರತೆಯ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಕೊರತೆ ಇಲ್ಲ ಹೆಚ್ಚುವರಿಯಾಗಿ ತರಿಸಿದ್ದೇವೆ ಎಂದು ತಿಳಿಸಿದರು.ಇತ್ತೀಚೆಗೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ವೈದ್ಯರು ನಿರ್ಲಕ್ಷ್ಯ ವಹಿಸಿದ ಬಗ್ಗೆ ವಿವರಣೆ ಪಡೆದುಕೊಂಡರು.

ಭೇಟಿಯಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ಪಿ.ಟಿ. ಕಳೆಂಜ, ನವೀನ್ ಗೌಡ ಸವಣಾಲು, ವೀರೇಂದ್ರ ಕುಮಾರ್ ಅಳದಂಗಡಿ, ರಶೀದ್ ಕಕ್ಕಿಂಜೆ, ವೆಂಕಣ್ಣ ಕೊಯ್ಯೂರು, ಸ್ಟೀವನ್ ಮೋನಿಸ್ ನಿಟ್ಟಡೆ, ಶ್ರೀಮತಿ ಸವಿತಾ ಸುಲ್ಕೇರಿ, ಹಾಗೂ ಯುವ ಕಾಂಗ್ರೆಸ್ ನ ವಿನಯ್ ಕುಮಾರ್ ಹಾಜರಿದ್ದರು.

Related posts

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!