22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶಾಲಾ ಮಾರ್ಗದರ್ಶಕ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ 5 ಡೆಸ್ಕ್ ಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.

ಮುಖ್ಯ ಅತಿಥಿಗಳಾಗಿ 1968 ನೇ ಸಾಲಿನಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ ಶ್ರೀಧರ್ ರಾವ್ ರವರು ಡೆಸ್ಕ್ ಗಳನ್ನು ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು ಹಾಗೂ ರೂ. 5,000 ಅಭಿವೃದ್ಧಿ ಕಾರ್ಯಗಳಿಗೆ ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕಧ್ಯಕ್ಷರ ಪುತ್ರರಾದ ನಾಗೇಶ್ ರಾವ್ ಮುಂಡ್ರುಪ್ಪಾಡಿ , ಕ್ಲಸ್ಟರ್ ನ ಸಿಆರ್ ಪಿ ಯವರಾದ ಶ್ರೀಮತಿ ಪ್ರತಿಮಾ , ಹಿರಿಯ ವಿದ್ಯಾರ್ಥಿ ಮಧುಸೂಧನ್, ಎಸ್.ಡಿ.ಮ್,ಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಹಾಗೂ ಡೆಸ್ಕ್ ಗಳನ್ನು ತಯಾರಿಸಿದ ಉದಯ್ ಆಚಾರ್ ಉಪಸ್ಥಿತರಿದ್ದರು.

Related posts

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya
error: Content is protected !!