24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ ಬನ್ನಿಸ್ ಇದರ ಜಂಟಿ ಆಶಯದೊಂದಿಗೆ ಜರುಗಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆಯ ವಿದ್ಯಾರ್ಥಿನಿಯರಾದ ಕು| ಸಾನಿಧ್ಯ ಹಾಗೂ ಕುಮಾರಿ ಅನನ್ಯ ಆಗಮಿಸಿ ವಾರವಿಡೀ ವಿದ್ಯಾರ್ಥಿಗಳಿಗೆ ಯೋಗ ತರಬೇತು ನೀಡಿದ್ದು ಅವರು ವಾರವಿಡೀ ಹೇಳಿಕೊಟ್ಟ ಯೋಗದ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಸಮಾರೋಪ ಸಮಾರಂಭವನ್ನು ಸಮಾಪ್ತಿಗೊಳಿಸಿದರು.

ಭಾರತ ಸ್ಕೌಟ್ ಗೈಡ್ ನ ವಿದ್ಯಾರ್ಥಿಗಳು ಬನ್ನಿ ಹಾಗೂ ಕಬ್ ಮತ್ತು ಬುಲ್ ಬುಲ್ ಗಳಿಗೆ ತಾವು ಕಲಿತಂತಹ ಆಸನಗಳ ತರಬೇತಿಯನ್ನು ನೀಡಿದರು. ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಕುಮಾರಿ ಇವರು ಅತಿಥಿಗಳಿಗೆ ಧನ್ಯವಾದವಿತ್ತರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಶಾಲಾ ಕ್ರೀಡಾ ಸಂಘದ ಮಾರ್ಗದರ್ಶಕರಾಗಿರುವ ಸಂತೋಷ್ ಇವರ ಸಹಾಯದೊಂದಿಗೆ ಯೋಗ ದಿನಾಚರಣೆ ಸಂಪನ್ನಗೊಂಡಿತು. ಶಾಲಾ ಶಿಕ್ಷಕ ವೃಂದ, ಕಬ್ ಬುಲ್ ಬುಲ್ ಹಾಗೂ ಸ್ಕೌಟ್ ಹಾಗೂ ಗೈಡ್ ಇದರ ಜವಾಬ್ದಾರಿ ಹೊತ್ತ ಶಿಕ್ಷಕರು ಭಾಗವಹಿಸಿದ್ದರು.

Related posts

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya
error: Content is protected !!