22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ ಬನ್ನಿಸ್ ಇದರ ಜಂಟಿ ಆಶಯದೊಂದಿಗೆ ಜರುಗಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆಯ ವಿದ್ಯಾರ್ಥಿನಿಯರಾದ ಕು| ಸಾನಿಧ್ಯ ಹಾಗೂ ಕುಮಾರಿ ಅನನ್ಯ ಆಗಮಿಸಿ ವಾರವಿಡೀ ವಿದ್ಯಾರ್ಥಿಗಳಿಗೆ ಯೋಗ ತರಬೇತು ನೀಡಿದ್ದು ಅವರು ವಾರವಿಡೀ ಹೇಳಿಕೊಟ್ಟ ಯೋಗದ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಸಮಾರೋಪ ಸಮಾರಂಭವನ್ನು ಸಮಾಪ್ತಿಗೊಳಿಸಿದರು.

ಭಾರತ ಸ್ಕೌಟ್ ಗೈಡ್ ನ ವಿದ್ಯಾರ್ಥಿಗಳು ಬನ್ನಿ ಹಾಗೂ ಕಬ್ ಮತ್ತು ಬುಲ್ ಬುಲ್ ಗಳಿಗೆ ತಾವು ಕಲಿತಂತಹ ಆಸನಗಳ ತರಬೇತಿಯನ್ನು ನೀಡಿದರು. ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಕುಮಾರಿ ಇವರು ಅತಿಥಿಗಳಿಗೆ ಧನ್ಯವಾದವಿತ್ತರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಶಾಲಾ ಕ್ರೀಡಾ ಸಂಘದ ಮಾರ್ಗದರ್ಶಕರಾಗಿರುವ ಸಂತೋಷ್ ಇವರ ಸಹಾಯದೊಂದಿಗೆ ಯೋಗ ದಿನಾಚರಣೆ ಸಂಪನ್ನಗೊಂಡಿತು. ಶಾಲಾ ಶಿಕ್ಷಕ ವೃಂದ, ಕಬ್ ಬುಲ್ ಬುಲ್ ಹಾಗೂ ಸ್ಕೌಟ್ ಹಾಗೂ ಗೈಡ್ ಇದರ ಜವಾಬ್ದಾರಿ ಹೊತ್ತ ಶಿಕ್ಷಕರು ಭಾಗವಹಿಸಿದ್ದರು.

Related posts

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!