23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಭವನದಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಒಂದು ಭೂಮಿ ಒಂದು ಆರೋಗ್ಯ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲ ಫಾ!ವಿಜಯ್ ಲೋಬೋ ಅವರು ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯರಾದ ಡಾ.ಅಬಿಟೋನ್ ಹಾಗೂ ಶಾರೀರಿಕ ಶಿಕ್ಷಕರಾದ ವಸಂತ ಹೆಗ್ಢೆ ಹಾಗು ನಿಶ್ಚಿತ್ ಅವರ ಜೊತೆಗೂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜಿನ ವೈದ್ಯರಾದ ಡಾ.ಅಬಿಟೋನ್, ತಮ್ಮ ಸಂದೇಶದಲ್ಲಿ ಯೋಗವನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವ ರೀತಿ ಜೀವನ ಶೈಲಿಯನ್ನು ಸುಧಾರಿಸಬಹುದು ಎಂದು ಹೇಳಿದರು. ಪ್ರಾಂಶುಪಾಲರು ತಮ್ಮ ಮಾತಿನಲ್ಲಿ ಇಂದು ಯೋಗದ ಕುರಿತು ಕೇವಲ ಭಾರತ ಮಾತ್ರವಲ್ಲ ಜಗತ್ತೇ ಮಾತನಾಡುತ್ತಿದೆ. ಆಧುನಿಕತೆಯ ಭರಾಟೆಯ ನಡುವೆ ಯೋಗದ ಮಹತ್ವವನ್ನು ವಿದೇಶಿಯರು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಮೂರು ದಿನದ ಯೋಗ ತರಬೇತಿಯನ್ನು ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ವೈದ್ಯವಿದ್ಯಾರ್ಥಿಗಳಾದ ಸುಪ್ರಿತಾ ಭಟ್, ಪ್ರಕೃತಿ, ಸಾರಂಗಿರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿತೆ ನಡೆಯಿತು. ಹಿರಿಯ ಶಿಕ್ಷಕಿ ವಿನಯಲತಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!