July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : “ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿ ಹಾಗೂ ಮನಸ್ಸಿನ ನೆಮ್ಮದಿಯನ್ನು ಪಡೆಯಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲೆ ಡಾ.ಸುಜಾತ ಕೆ.ಜೆ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಕುರಿತು ತಿಳಿಸಿದರು.

ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದ ಪ್ರಕಾಶ್ ನಿರೂಪಿಸಿ ಶಿಕ್ಷಕಿ ಶಮೀಮ್ ವಂದಿಸಿದರು.

Related posts

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!