July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾರತೀಯ ಡೆಂಟಲ್ ಅಸೋಸಿಯೇಷನ್ ನ ಪುತ್ತೂರು ಶಾಖೆಯ ಅಧ್ಯಕ್ಷೆ ಡಾ| ಆಶಾ ರಾಘವೇಂದ್ರ ಪಿದಮಲೆ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಯೋಗವು ಮನಸ್ಸಿಗೆ ಆನಂದ ನೀಡುತ್ತದೆ, ಕೋಪವನ್ನು ನಿಯಂತ್ರಿಸುತ್ತದೆ. ತಾಳ್ಮೆ ಎನ್ನುವ ಜೀವನಪಾಠವನ್ನು ಕಲಿಸುತ್ತದೆ ಎಂದರು.

ಮುಖ್ಯ ಅತಿಥಿ, ಉಜಿರೆಯ ಎಸ್.ಡಿ.ಎಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯ ಪ್ರಾಧ್ಯಾಪಕ ಡಾ| ಪ್ರಣವ್ ಪಿ.ಪಿ. ಮಾತನಾಡಿ, ಯೋಗವು ಮಾನಸಿಕವಾಗಿ ದೈಹಿಕವಾಗಿ ಪರಿಣಾಮ ಬಿರುತ್ತದೆ. ರಕ್ತದೊತ್ತಡ, ಸಕ್ಕರೆ ಕಾಯಿಲೆ, ಅಸ್ತಮಾ ಮುಂತಾದ ಸಮಸ್ಯೆಗಳನ್ನು ಯೋಗದಿಂದ ಗುಣಪಡಿಸಬಹುದು. ಕೋವಿಡ್ ಸಂದರ್ಭದಲ್ಲಿ ಯೋಗ ಉಪಯೋಗವಾಗಿದೆ ಎಂದರು. ಯೋಗದ ಒಂದು ಶುದ್ಧೀಕರಣ ವ್ಯಾಯಾಮವಾದ ನೌಲಿ ಕ್ರಿಯೆಯ ಪ್ರಾತ್ಯಕ್ಷಿಕೆಯನ್ನು ಮಾಡಿ ತೋರಿಸಿದರು.

ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಶಿಕ್ಷಣ ಸಂಯೋಜಕ ಶಶಿಶೇಖರ್ ಎನ್. ಕಾಕತ್ಕರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್, ಯೋಗ ತರಬೇತುದಾರರು, ಎಸ್.ಡಿ.ಎಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಕ್ಷಮಾ ಮತ್ತು ಅಮೃತವರ್ಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಸುರೇಶ್ ಕೆ. ಸ್ವಾಗತಿಸಿದರು. ಸಂಸ್ಕೃತ ಅಧ್ಯಾಪಕಿ ಭಾಗ್ಯಲಕ್ಷ್ಮೀ ಅತಿಥಿ ಪರಿಚಯ ನೀಡಿದರು. 8ನೇ ತರಗತಿ ವಿದ್ಯಾಥಿನಿಯರು ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮ ಸಂಘಟಕ, ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ವಂದಿಸಿದರು. ಜ್ಞಾನೇಶ್ ಕಾರ್ಯಕ್ರಮ ನಿರೂಪಿಸಿದರು.

ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya
error: Content is protected !!