September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಕ್ಯಪದವು: ಎಲ್‌. ಸಿ. ಆರ್. ವಿದ್ಯಾ ಸಂಸ್ಥೆ ವಿಶ್ವ ಯೋಗ ದಿನಾಚರಣೆ ” ಒಂದೇ ಭೂಮಿ ಒಂದೇ ಆರೋಗ್ಯ” ಎಂಬ ಘೋಷ ವಾಕ್ಯದೊಂದಿಗೆ ಸಂಸ್ಥೆಯಲ್ಲಿ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ಯನ್ನು ಜೂ.21ರಂದು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್‌ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ಜಿ ಕೆ ಪ್ರಾಸ್ತಾವಿಕ ನುಡಿಗಳೊಂದಿಗೆ “ಮಾಡಿದರೆ ಯೋಗ, ದೂರವಾಗುವುದು ರೋಗ” ಎಂಬ ಮಹತ್ವಪೂರ್ಣ ಮಾತಿನಂತೆ ಉತ್ತಮ ಆರೋಗ್ಯ, ಏಕಾಗ್ರತೆ ಹಾಗೂ ಸಮಚಿತ್ತಕ್ಕಾಗಿ ‘ಯೋಗ’ ಒಂದು ದಿವ್ಯೌಷಧ. ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತರಾಗಿರಿ ಎಂದು ಕಿವಿಮಾತನ್ನು ಹೇಳುತ್ತ ವಿದ್ಯಾರ್ಥಿಗಳಿಗೆ ಯೋಗಾಸನದ ಅರಿವನ್ನು ಮೂಡಿಸಿದರು.

ತರಗತಿವಾರು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಯೋಗಗಳನ್ನು ಮಾಡಿಸಿದರು. ಯೋಗಾಭ್ಯಾಸದ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯ ಗಮನಾರ್ಹ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಸಹ ಶಿಕ್ಷಕಿ ಸೌಮ್ಯ ಬಿ. ಆರ್. ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್‌ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕು.ವಿಜಯ ಹಾಗೂ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.


Related posts

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!