25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯ ಉಪ್ಪಿನಂಗಡಿ ತಾಲೂಕು, ಗುರುವಾಯನಕೆರೆ ನಮ್ಮ ಮನೆ ಮತ್ತು ಪಾಂಡುರಂಗ ಶಾಖೆ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರಂದು ಆಚರಿಸಲಾಯಿತು.

ಶಾಸಕ ಹರೀಶ್ ಪೂಂಜಾರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಯೋಗ ದಿನಾಚರಣೆಯ ಮಹತ್ವ ತಿಳಿಸಿ ಶುಭಕೋರಿದರು. ಯೋಗ ಬಂಧು ಸಂತೋಷ್ ಕಾಪಿನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಸಂಸ್ಕಾರ, ಸೇವೆ, ಶಿಕ್ಷಣದ ಮೂಲಕ ಯೋಗ ತರಬೇತಿಯನ್ನು ನಡೆಸುತ್ತಾ ಸ್ವಸ್ಥ ಸಮಾಜಕ್ಕೆ ಬುನಾದಿ ಹಾಕಿದೆ ಎಂದರು. ಪಾಂಡುರಂಗ ಶಾಖೆಯ ಯೋಗಬಂಧು ವಿದ್ಯಾನಾಯಕ್ ಅಮೃತವಚನ ವಾಚಿಸಿದರು.

ಪ್ರವೀಣರವರು ಪಂಚಾಂಗ ಪಠನ ಮಾಡಿದರು. ಯೋಗ ಶಿಕ್ಷಕ ದಯಾನಂದ ಯಾದವರು ಮಾನಸಿಕ ಸಿದ್ಧತೆ, ಉಸಿರಾಟ ಕ್ರಿಯೆ, ಗಣಪತಿ ನಮಸ್ಕಾರ ನಡೆಸಿಕೊಟ್ಟರು. ಶ್ರೀಮತಿ ಜಯಶ್ರೀ ಹಾಗೂ ಲೋಕೇಶ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ನಮ್ಮ ಮನೆ ಶಾಖೆಯ ಯೋಗ ಶಿಕ್ಷಕ ಶಿವಣ್ಣ ಆಯುಷ್ ಪಠ್ಯ ಕ್ರಮದಂತೆ ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಶ್ರೀಮತಿ ಪ್ರಿಯ ಹಾಗೂ ವಿನಯರವರು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಯೋಗ ಶಾಖೆಯ ಮಾರ್ಗದರ್ಶಕರಾದ ಪ್ರದೀಪ್ ಆಚಾರ್ಯರವರು ಯೋಗ ದಿನಾಚರಣಾ ಕಾರ್ಯಕ್ರಮದ ಸಮಾಪನ ನಡೆಸಿಕೊಟ್ಟರು. ಎಲ್ಲಾ ಯೋಗ ಬಂಧುಗಳು ಜೊತೆ ಸೇರಿ ಅಗ್ನಿ ಹೋತ್ರ ನಡೆಸಲಾಯಿತು. ಸುಮಾರು 100ರಷ್ಟು ಯೋಗಬಂಧುಗಳು ಭಾಗವಹಿಸಿದ್ದರು.

ನಮ್ಮ ಮನೆ ಶಾಖೆಯ ಶ್ರೀಮತಿ ಸುಮಲತಾ ಸ್ವಾಗತಿಸಿದರು. ರಾಮಚಂದ್ರ ಶೆಟ್ಟಿ ವಂದಿಸಿದರು.

Related posts

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya
error: Content is protected !!