22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

ವೇಣೂರು:ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ದಾಸ್ತಾನು ಹಾಗೂ ಮಾರಾಟ ಮಾಡುತ್ತಿದ್ದ ಗುಂಡೂರಿ ಅಂಗಡಿ ಮಾಲೀಕನನ್ನು ವೇಣೂರು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡ ಬಗ್ಗೆ ಜೂ. 20 ರಂದು ವರದಿಯಾಗಿದೆ.

ಪೋಲೀಸರು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ ಬಜಿರೆ ಎಂಬಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ತಾಲೂಕು ಗುಂಡೂರಿ ಗ್ರಾಮದ ಗುಂಡೂರಿ ಬಳಿ ಇರುವ ದಿನಸಿ ಅಂಗಡಿಯಲ್ಲಿ ಹರೀಶ್‌ ಎಂಬಾತನು ಅಕ್ರಮವಾಗಿ ಮದ್ಯವನ್ನು ದಾಸ್ತಾನು ಇರಿಸಿ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಪೋಲಿಸರು ಗೆ ದಾಳಿ ನಡೆಸಿ ಅಂಗಡಿಯಲ್ಲಿದ್ದ ಒಂದು ಪ್ಲಾಸ್ಟಿಕ್‌ ಚೀಲದಲ್ಲಿ 90 ML ಸಾಮರ್ಥ್ಯದ 44 ಮದ್ಯ ತುಂಬಿದ ಸ್ಯಾಚೆಟ್‌ಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ.

ಪತ್ತೆ ಹಚ್ಚಲಾದ ಮದ್ಯದ ಒಟ್ಟು ಪ್ರಮಾಣ 3.960 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ 1760/- ಆಗಿರುತ್ತದೆ. ಈ ಬಗ್ಗೆ ವೇಣೂರು ಪೋಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!