23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

ವೇಣೂರು:ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ದಾಸ್ತಾನು ಹಾಗೂ ಮಾರಾಟ ಮಾಡುತ್ತಿದ್ದ ಗುಂಡೂರಿ ಅಂಗಡಿ ಮಾಲೀಕನನ್ನು ವೇಣೂರು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡ ಬಗ್ಗೆ ಜೂ. 20 ರಂದು ವರದಿಯಾಗಿದೆ.

ಪೋಲೀಸರು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ ಬಜಿರೆ ಎಂಬಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ತಾಲೂಕು ಗುಂಡೂರಿ ಗ್ರಾಮದ ಗುಂಡೂರಿ ಬಳಿ ಇರುವ ದಿನಸಿ ಅಂಗಡಿಯಲ್ಲಿ ಹರೀಶ್‌ ಎಂಬಾತನು ಅಕ್ರಮವಾಗಿ ಮದ್ಯವನ್ನು ದಾಸ್ತಾನು ಇರಿಸಿ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಪೋಲಿಸರು ಗೆ ದಾಳಿ ನಡೆಸಿ ಅಂಗಡಿಯಲ್ಲಿದ್ದ ಒಂದು ಪ್ಲಾಸ್ಟಿಕ್‌ ಚೀಲದಲ್ಲಿ 90 ML ಸಾಮರ್ಥ್ಯದ 44 ಮದ್ಯ ತುಂಬಿದ ಸ್ಯಾಚೆಟ್‌ಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ.

ಪತ್ತೆ ಹಚ್ಚಲಾದ ಮದ್ಯದ ಒಟ್ಟು ಪ್ರಮಾಣ 3.960 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ 1760/- ಆಗಿರುತ್ತದೆ. ಈ ಬಗ್ಗೆ ವೇಣೂರು ಪೋಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya
error: Content is protected !!