September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

ವೇಣೂರು:ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ದಾಸ್ತಾನು ಹಾಗೂ ಮಾರಾಟ ಮಾಡುತ್ತಿದ್ದ ಗುಂಡೂರಿ ಅಂಗಡಿ ಮಾಲೀಕನನ್ನು ವೇಣೂರು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡ ಬಗ್ಗೆ ಜೂ. 20 ರಂದು ವರದಿಯಾಗಿದೆ.

ಪೋಲೀಸರು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ ಬಜಿರೆ ಎಂಬಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ತಾಲೂಕು ಗುಂಡೂರಿ ಗ್ರಾಮದ ಗುಂಡೂರಿ ಬಳಿ ಇರುವ ದಿನಸಿ ಅಂಗಡಿಯಲ್ಲಿ ಹರೀಶ್‌ ಎಂಬಾತನು ಅಕ್ರಮವಾಗಿ ಮದ್ಯವನ್ನು ದಾಸ್ತಾನು ಇರಿಸಿ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಪೋಲಿಸರು ಗೆ ದಾಳಿ ನಡೆಸಿ ಅಂಗಡಿಯಲ್ಲಿದ್ದ ಒಂದು ಪ್ಲಾಸ್ಟಿಕ್‌ ಚೀಲದಲ್ಲಿ 90 ML ಸಾಮರ್ಥ್ಯದ 44 ಮದ್ಯ ತುಂಬಿದ ಸ್ಯಾಚೆಟ್‌ಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ.

ಪತ್ತೆ ಹಚ್ಚಲಾದ ಮದ್ಯದ ಒಟ್ಟು ಪ್ರಮಾಣ 3.960 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ 1760/- ಆಗಿರುತ್ತದೆ. ಈ ಬಗ್ಗೆ ವೇಣೂರು ಪೋಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya
error: Content is protected !!