ಧರ್ಮಸ್ಥಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಓದುವ ಬೆಳಕು ಕಾರ್ಯಕ್ರಮದಡಿ ಧರ್ಮಸ್ಥಳ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ರವರು ದೀಪ ಬೆಳಗಿಸಿ ಯೋಗಭ್ಯಾಸವನ್ನು ಮಾಡುವುದರಿಂದ ಆಗುವ ಪ್ರಯೋಜನವನ್ನು ತಿಳಿಸಿದರು.

ಲೆಕ್ಕ ಸಹಾಯಕಿಯಾದ ಶ್ರೀಮತಿ ಪ್ರಮೀಳಾ ಯೋಗದ ಜೊತೆಗೆ ಸಂಗೀತ ದಿನದ ಹಾಗೂ ವಿಕಲಚೇತನರ ದಿನದ ಶುಭಾಶಯಗಳನ್ನು ಕೋರಿದರು. ಯೋಗ ತರಬೇತುದಾರರಾಗಿ ಆಗಮಿಸಿದ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಆರಾಧನ್ ಕಿಶೋರ್ ರವರು ಆಸನಗಳಿಂದ ಆಗುವ ಪ್ರಯೋಜನಗಳ ಬಗ್ಗೆ ಉಪನ್ಯಾಸವನ್ನಿತ್ತು, ವಿವಿಧ ಯೋಗಾಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ವಾಲ್ಮೀಕಿ ಆಶ್ರಮ ಶಾಲೆಯ 20 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.











