25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿವರದಿ

ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ರೂ.3.20 ಲಕ್ಷ ವಂಚನೆ ಆರೋಪ ಬೆಂಗಳೂರಿನ ಮಹಿಳೆ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರು ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ಪ್ರಕರಣವೊಂದನ್ನು ಬಗೆ ಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡಂತ್ಯಾರ್‌ನ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಈ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್ಟುಕ್ ಮೂಲಕ ಪರಿಚಯವಾಗಿದ್ದಾಳೆ. ತಾನು ನೊಂದವರ ಹಾಗೂ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಎಂದು ರಾಜೇಶ್ ಅವರಿಗೆ ನಂಬಿಸಿದ್ದಾಳೆ.

ಆಗ, ರಾಜೇಶ್ ಅವರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್‌ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಇದನ್ನು ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್ ಅವರು ಸಂಧ್ಯಾಗೆ ಪ್ರಶ್ನಿಸಿದ್ದಾರೆ.ಆಗ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಹೇಳಿದ್ದಾರೆ .ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್ ಅವರು ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಎನ್‌ಎಸ್‌ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya
error: Content is protected !!