23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿಸಲ್ಪಟ್ಟ ರಿಕ್ಷಾ ಚಾಲಕ ಮಾಲಕರ ಸಂಘ ಬೆಳ್ತಂಗಡಿ ಇದರ ಚಾಲಕರ ಆಪತ್ಕಾಲದ ಸಹಾಯಧನ ನೀಡಲು ಅಂಗೀಕರಿಸಿದ ಕ್ಷೇಮನಿಧಿ ಯೋಜನೆಯ ವತಿಯಿಂದ ವೇಣೂರು ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯೆಯಾದ ಶ್ರೀಮತಿ ಗೀತಾ ಇವರು ರಿಕ್ಷಾ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಸ್ತುತ ಮನೆಯಲ್ಲೇ ವಿಶ್ರಾಂತಿಯಲ್ಲಿರುವ ಕಾರಣ ಇವರಿಗೆ ಕ್ಷೇಮನಿಧಿಯ ಆಪತ್ಕಾಲದ 26ನೇ ಸಹಾಯಧನವಾಗಿ ರೂ. 3000 ಮೊತ್ತವನ್ನು ನೀಡಿ ಚಿಕಿತ್ಸೆಗೆ ಸಹಕರಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯದ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಸಂತ ಮಡಿವಾಳ, ಕಾರ್ಯದರ್ಶಿಗಳಾದ ರಾಜೇಂದ್ರ ಜೈನ್ , ಉಪಾಧ್ಯಕ್ಷ ದೇವದಾಸ್ ಮೂಡುಕೋಡಿ, ಸಂಘದ ಹಿರಿಯ ಸದಸ್ಯ ಯೋಗೀಶ್ ಪೂಜಾರಿ ನಾರ್ಲ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya
error: Content is protected !!