September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಭೇಟಿ ನೀಡಿದರು.
ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ರಕ್ತ ಪರೀಕ್ಷಾ ಕೇಂದ್ರ, ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ವೈದ್ಯಾಧಿಕಾರಿ ಡಾ.ರಮೇಶ್ ರವರನ್ನು ಬೇಟಿ ಮಾಡಿ ತಾಲೂಕಿನಾಧ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಮುಂಜಾಗೃತಾ ಕ್ರಮವಹಿಸುವಂತೆ ತಿಳಿಸಿದರು. ತಾಲೂಕಿನಲ್ಲಿ 19 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು. ರೋಗಿಗಳಿಗೆ ನೀಡಲು ಔಷದ ಕೊರತೆಯ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಕೊರತೆ ಇಲ್ಲ ಹೆಚ್ಚುವರಿಯಾಗಿ ತರಿಸಿದ್ದೇವೆ ಎಂದು ತಿಳಿಸಿದರು.ಇತ್ತೀಚೆಗೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ವೈದ್ಯರು ನಿರ್ಲಕ್ಷ್ಯ ವಹಿಸಿದ ಬಗ್ಗೆ ವಿವರಣೆ ಪಡೆದುಕೊಂಡರು.

ಭೇಟಿಯಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ಪಿ.ಟಿ. ಕಳೆಂಜ, ನವೀನ್ ಗೌಡ ಸವಣಾಲು, ವೀರೇಂದ್ರ ಕುಮಾರ್ ಅಳದಂಗಡಿ, ರಶೀದ್ ಕಕ್ಕಿಂಜೆ, ವೆಂಕಣ್ಣ ಕೊಯ್ಯೂರು, ಸ್ಟೀವನ್ ಮೋನಿಸ್ ನಿಟ್ಟಡೆ, ಶ್ರೀಮತಿ ಸವಿತಾ ಸುಲ್ಕೇರಿ, ಹಾಗೂ ಯುವ ಕಾಂಗ್ರೆಸ್ ನ ವಿನಯ್ ಕುಮಾರ್ ಹಾಜರಿದ್ದರು.

Related posts

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya
error: Content is protected !!