25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಭೇಟಿ ನೀಡಿದರು.
ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ರಕ್ತ ಪರೀಕ್ಷಾ ಕೇಂದ್ರ, ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ವೈದ್ಯಾಧಿಕಾರಿ ಡಾ.ರಮೇಶ್ ರವರನ್ನು ಬೇಟಿ ಮಾಡಿ ತಾಲೂಕಿನಾಧ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಮುಂಜಾಗೃತಾ ಕ್ರಮವಹಿಸುವಂತೆ ತಿಳಿಸಿದರು. ತಾಲೂಕಿನಲ್ಲಿ 19 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು. ರೋಗಿಗಳಿಗೆ ನೀಡಲು ಔಷದ ಕೊರತೆಯ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಕೊರತೆ ಇಲ್ಲ ಹೆಚ್ಚುವರಿಯಾಗಿ ತರಿಸಿದ್ದೇವೆ ಎಂದು ತಿಳಿಸಿದರು.ಇತ್ತೀಚೆಗೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ವೈದ್ಯರು ನಿರ್ಲಕ್ಷ್ಯ ವಹಿಸಿದ ಬಗ್ಗೆ ವಿವರಣೆ ಪಡೆದುಕೊಂಡರು.

ಭೇಟಿಯಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ಪಿ.ಟಿ. ಕಳೆಂಜ, ನವೀನ್ ಗೌಡ ಸವಣಾಲು, ವೀರೇಂದ್ರ ಕುಮಾರ್ ಅಳದಂಗಡಿ, ರಶೀದ್ ಕಕ್ಕಿಂಜೆ, ವೆಂಕಣ್ಣ ಕೊಯ್ಯೂರು, ಸ್ಟೀವನ್ ಮೋನಿಸ್ ನಿಟ್ಟಡೆ, ಶ್ರೀಮತಿ ಸವಿತಾ ಸುಲ್ಕೇರಿ, ಹಾಗೂ ಯುವ ಕಾಂಗ್ರೆಸ್ ನ ವಿನಯ್ ಕುಮಾರ್ ಹಾಜರಿದ್ದರು.

Related posts

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!