23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಮುಂಡಾಜೆ: ‘ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಉಜಿರೆಯ ಶ್ರೀ.ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹರ್ಷಿಣಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ‘ನಮ್ಮ ಮನಸ್ಸು ಮತ್ತು ದೇಹವನ್ನು ಹತೋಟಿಯಲ್ಲಿಡಲು ಯೋಗ ಉತ್ತಮವಾದ ವಿಧಾನ; ಪರಿಸರದೊಂದಿಗೆ ಅವಲಂಬಿತರಾದ ನಾವು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯಕ್ಕಾಗಿ ಪ್ರತಿದಿನ ಯೋಗಾಭ್ಯಾಸ ಮಾಡಬೇಕು’ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಗೀತಾ ಮಾತನಾಡಿ, ಯೋಗದ ಹಿನ್ನೆಲೆ ಹಾಗೂ ವಿದ್ಯಾರ್ಥಿಗಳಿಗೆ ಯೋಗದ ಪ್ರಸ್ತುತತೆಯನ್ನು ತಿಳಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಶ್ರಾವ್ಯ ನಿರೂಪಿಸಿ, ನಳಿನಿ ಧನ್ಯವಾದಗೈದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಯೋಗಪ್ರದರ್ಶನ ಹಾಗೂ ಶ್ಲೋಕ ಪಠಣ ನಡೆಯಿತು.

Related posts

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya
error: Content is protected !!