25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ ಬನ್ನಿಸ್ ಇದರ ಜಂಟಿ ಆಶಯದೊಂದಿಗೆ ಜರುಗಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆಯ ವಿದ್ಯಾರ್ಥಿನಿಯರಾದ ಕು| ಸಾನಿಧ್ಯ ಹಾಗೂ ಕುಮಾರಿ ಅನನ್ಯ ಆಗಮಿಸಿ ವಾರವಿಡೀ ವಿದ್ಯಾರ್ಥಿಗಳಿಗೆ ಯೋಗ ತರಬೇತು ನೀಡಿದ್ದು ಅವರು ವಾರವಿಡೀ ಹೇಳಿಕೊಟ್ಟ ಯೋಗದ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಸಮಾರೋಪ ಸಮಾರಂಭವನ್ನು ಸಮಾಪ್ತಿಗೊಳಿಸಿದರು.

ಭಾರತ ಸ್ಕೌಟ್ ಗೈಡ್ ನ ವಿದ್ಯಾರ್ಥಿಗಳು ಬನ್ನಿ ಹಾಗೂ ಕಬ್ ಮತ್ತು ಬುಲ್ ಬುಲ್ ಗಳಿಗೆ ತಾವು ಕಲಿತಂತಹ ಆಸನಗಳ ತರಬೇತಿಯನ್ನು ನೀಡಿದರು. ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಕುಮಾರಿ ಇವರು ಅತಿಥಿಗಳಿಗೆ ಧನ್ಯವಾದವಿತ್ತರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಶಾಲಾ ಕ್ರೀಡಾ ಸಂಘದ ಮಾರ್ಗದರ್ಶಕರಾಗಿರುವ ಸಂತೋಷ್ ಇವರ ಸಹಾಯದೊಂದಿಗೆ ಯೋಗ ದಿನಾಚರಣೆ ಸಂಪನ್ನಗೊಂಡಿತು. ಶಾಲಾ ಶಿಕ್ಷಕ ವೃಂದ, ಕಬ್ ಬುಲ್ ಬುಲ್ ಹಾಗೂ ಸ್ಕೌಟ್ ಹಾಗೂ ಗೈಡ್ ಇದರ ಜವಾಬ್ದಾರಿ ಹೊತ್ತ ಶಿಕ್ಷಕರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!