September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ ಬನ್ನಿಸ್ ಇದರ ಜಂಟಿ ಆಶಯದೊಂದಿಗೆ ಜರುಗಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆಯ ವಿದ್ಯಾರ್ಥಿನಿಯರಾದ ಕು| ಸಾನಿಧ್ಯ ಹಾಗೂ ಕುಮಾರಿ ಅನನ್ಯ ಆಗಮಿಸಿ ವಾರವಿಡೀ ವಿದ್ಯಾರ್ಥಿಗಳಿಗೆ ಯೋಗ ತರಬೇತು ನೀಡಿದ್ದು ಅವರು ವಾರವಿಡೀ ಹೇಳಿಕೊಟ್ಟ ಯೋಗದ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಸಮಾರೋಪ ಸಮಾರಂಭವನ್ನು ಸಮಾಪ್ತಿಗೊಳಿಸಿದರು.

ಭಾರತ ಸ್ಕೌಟ್ ಗೈಡ್ ನ ವಿದ್ಯಾರ್ಥಿಗಳು ಬನ್ನಿ ಹಾಗೂ ಕಬ್ ಮತ್ತು ಬುಲ್ ಬುಲ್ ಗಳಿಗೆ ತಾವು ಕಲಿತಂತಹ ಆಸನಗಳ ತರಬೇತಿಯನ್ನು ನೀಡಿದರು. ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಕುಮಾರಿ ಇವರು ಅತಿಥಿಗಳಿಗೆ ಧನ್ಯವಾದವಿತ್ತರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಶಾಲಾ ಕ್ರೀಡಾ ಸಂಘದ ಮಾರ್ಗದರ್ಶಕರಾಗಿರುವ ಸಂತೋಷ್ ಇವರ ಸಹಾಯದೊಂದಿಗೆ ಯೋಗ ದಿನಾಚರಣೆ ಸಂಪನ್ನಗೊಂಡಿತು. ಶಾಲಾ ಶಿಕ್ಷಕ ವೃಂದ, ಕಬ್ ಬುಲ್ ಬುಲ್ ಹಾಗೂ ಸ್ಕೌಟ್ ಹಾಗೂ ಗೈಡ್ ಇದರ ಜವಾಬ್ದಾರಿ ಹೊತ್ತ ಶಿಕ್ಷಕರು ಭಾಗವಹಿಸಿದ್ದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya
error: Content is protected !!