22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ ಬನ್ನಿಸ್ ಇದರ ಜಂಟಿ ಆಶಯದೊಂದಿಗೆ ಜರುಗಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆಯ ವಿದ್ಯಾರ್ಥಿನಿಯರಾದ ಕು| ಸಾನಿಧ್ಯ ಹಾಗೂ ಕುಮಾರಿ ಅನನ್ಯ ಆಗಮಿಸಿ ವಾರವಿಡೀ ವಿದ್ಯಾರ್ಥಿಗಳಿಗೆ ಯೋಗ ತರಬೇತು ನೀಡಿದ್ದು ಅವರು ವಾರವಿಡೀ ಹೇಳಿಕೊಟ್ಟ ಯೋಗದ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಸಮಾರೋಪ ಸಮಾರಂಭವನ್ನು ಸಮಾಪ್ತಿಗೊಳಿಸಿದರು.

ಭಾರತ ಸ್ಕೌಟ್ ಗೈಡ್ ನ ವಿದ್ಯಾರ್ಥಿಗಳು ಬನ್ನಿ ಹಾಗೂ ಕಬ್ ಮತ್ತು ಬುಲ್ ಬುಲ್ ಗಳಿಗೆ ತಾವು ಕಲಿತಂತಹ ಆಸನಗಳ ತರಬೇತಿಯನ್ನು ನೀಡಿದರು. ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಕುಮಾರಿ ಇವರು ಅತಿಥಿಗಳಿಗೆ ಧನ್ಯವಾದವಿತ್ತರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಶಾಲಾ ಕ್ರೀಡಾ ಸಂಘದ ಮಾರ್ಗದರ್ಶಕರಾಗಿರುವ ಸಂತೋಷ್ ಇವರ ಸಹಾಯದೊಂದಿಗೆ ಯೋಗ ದಿನಾಚರಣೆ ಸಂಪನ್ನಗೊಂಡಿತು. ಶಾಲಾ ಶಿಕ್ಷಕ ವೃಂದ, ಕಬ್ ಬುಲ್ ಬುಲ್ ಹಾಗೂ ಸ್ಕೌಟ್ ಹಾಗೂ ಗೈಡ್ ಇದರ ಜವಾಬ್ದಾರಿ ಹೊತ್ತ ಶಿಕ್ಷಕರು ಭಾಗವಹಿಸಿದ್ದರು.

Related posts

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಕ್ಕೆ ಪ್ರಭಾರ ಘಟಕಾಧಿಕಾರಿಯಾಗಿ ಡೇನಿಸ್ ಡಿ’ಸೋಜ ನೇಮಕ

Suddi Udaya
error: Content is protected !!