September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್. ಪಿಯು ಕಾಲೇಜಿನಲ್ಲಿ ಯೋಗ ಶಿಬಿರ ಉದ್ಘಾಟನೆ

ಉಜಿರೆ: 11ನೇ ವಿಶ್ವ ಯೋಗ ದಿನದ ಪ್ರಯುಕ್ತ  ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ವತಿಯಿಂದ ಯೋಗ  ಶಿಬಿರವನ್ನು  ಆಯೋಜಿಸಲಾಗಿತ್ತು. ಶಿಬಿರವನ್ನು  ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಧ್ಯಾಪಕಿ ಡಾ. ಹರ್ಷಿಣಿ  ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ” ಯೋಗ ಮನಸ್ಸನ್ನು ಹತೋಟಿಯಲ್ಲಿ ಇಡಲು ಸಹಕಾರಿ. ಪ್ರತಿ ದಿನ ಯೋಗ ಮಾಡುವುದರಿಂದ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬಹುದು “ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ ” ಯೋಗ ಶಿಬಿರದಲ್ಲಿ ಕಲಿತ ಯೋಗ ಜ್ಞಾನವನ್ನು ಬರಿ ಇಲ್ಲಿಗೆ ಸೀಮಿತಗೊಳಿಸದೆ ಮುಂದೆಯೂ ಅಳವಡಿಸಿಕೊಂಡು  ಅರೋಗ್ಯವಂತ ಜೀವನ ನಡೆಸುವಂತಾಗಲಿ  ” ಎಂದು ಹೇಳಿದರು. 

ವೇದಿಕೆಯಲ್ಲಿ ಉಜಿರೆ ಎಸ್ ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಡಾ.ಚೇತನಾ ಭಟ್ , ಜೀವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಕೋಮಲ್ ಪಿ ಸಿ, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್,ಸಹಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಉಪಸ್ಥಿತರಿದ್ದರು. 

ಸ್ವಯಂ ಸೇವಕಿ ರಾಶಿಕಾ ನಿರೂಪಿಸಿ   ನಾಗಲಕ್ಷ್ಮಿ ಸ್ವಾಗತಿಸಿ ಮೌಲ್ಯ ವಂದಿಸಿದರು.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ, ಒಂಬತ್ತನೇ ವರ್ಷದ ” ಸ್ಕೌಟ್ ಗಣಪತಿ” ಪೂಜೆ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya
error: Content is protected !!