30.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್. ಪಿಯು ಕಾಲೇಜಿನಲ್ಲಿ ಯೋಗ ಶಿಬಿರ ಉದ್ಘಾಟನೆ

ಉಜಿರೆ: 11ನೇ ವಿಶ್ವ ಯೋಗ ದಿನದ ಪ್ರಯುಕ್ತ  ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ವತಿಯಿಂದ ಯೋಗ  ಶಿಬಿರವನ್ನು  ಆಯೋಜಿಸಲಾಗಿತ್ತು. ಶಿಬಿರವನ್ನು  ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಧ್ಯಾಪಕಿ ಡಾ. ಹರ್ಷಿಣಿ  ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ” ಯೋಗ ಮನಸ್ಸನ್ನು ಹತೋಟಿಯಲ್ಲಿ ಇಡಲು ಸಹಕಾರಿ. ಪ್ರತಿ ದಿನ ಯೋಗ ಮಾಡುವುದರಿಂದ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬಹುದು “ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ ” ಯೋಗ ಶಿಬಿರದಲ್ಲಿ ಕಲಿತ ಯೋಗ ಜ್ಞಾನವನ್ನು ಬರಿ ಇಲ್ಲಿಗೆ ಸೀಮಿತಗೊಳಿಸದೆ ಮುಂದೆಯೂ ಅಳವಡಿಸಿಕೊಂಡು  ಅರೋಗ್ಯವಂತ ಜೀವನ ನಡೆಸುವಂತಾಗಲಿ  ” ಎಂದು ಹೇಳಿದರು. 

ವೇದಿಕೆಯಲ್ಲಿ ಉಜಿರೆ ಎಸ್ ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಡಾ.ಚೇತನಾ ಭಟ್ , ಜೀವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಕೋಮಲ್ ಪಿ ಸಿ, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್,ಸಹಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಉಪಸ್ಥಿತರಿದ್ದರು. 

ಸ್ವಯಂ ಸೇವಕಿ ರಾಶಿಕಾ ನಿರೂಪಿಸಿ   ನಾಗಲಕ್ಷ್ಮಿ ಸ್ವಾಗತಿಸಿ ಮೌಲ್ಯ ವಂದಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya
error: Content is protected !!