ಶಾಲಾ ಕಾಲೇಜು

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜು :ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕೊಯ್ಯೂರು
“ಮಾನಸಿಕ ಮತ್ತು ದೈಹಿಕ ದೃಢ ತೆಯನ್ನು ಕಾಯ್ದುಕೊಳ್ಳಲು ಯೋಗ ಅತ್ಯಂತ ಅವಶ್ಯಕವಾದುದು ” ಎಂಬುದಾಗಿ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶ್ರೀ ರಾಧಾಕೃಷ್ಣ ತಚ್ಛಮೆ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನ ದ ಉದ್ಘಾಟನೆಗೈದು ಯೋಗವನ್ನು ವಿದ್ಯಾರ್ಥಿಗಳು ನಿತ್ಯ ಜೀವನ ದಲ್ಲಿ ನಿರಂತರ ವಾಗಿ ನಡೆಸಿದಾಗ ರೋಗಮುಕ್ತ ಸಮಾಜದ ನಿರ್ಮಾಣ ಮಾಡಲು ಸಾಧ್ಯ ವಾಗುತ್ತದೆ ಎಂದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರವೀಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಯೋಗ ತರಬೇತುದಾರರಾದ ಎಸ್ ಡಿ ಎಂ ಪ್ರಕೃತಿ ಮತ್ತು ಯೋಗವಿಜ್ಞಾನ ಕಾಲೇಜ್ ನ ಅಭಿಜ್ಞ ವಿ. ಎಂ. ವಿದ್ಯಾರ್ಥಿಗಳಿಗೆ ಯೋಗಾ ಭ್ಯಾಸವನ್ನು ನಡೆಸಿ ಕೊಟ್ಟರು .ಕಾಲೇಜ್ ನ ಎಲ್ಲಾ ವಿದ್ಯಾರ್ಥಿಗಳು ಯೋಗ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಾದ ವಿನಯ, ವಂಶಿಕ, ಐಶ್ವರ್ಯ, ಚಿರಸ್ವಿ, ಸೌಜನ್ಯ, ಫಾತಿಮತ್ ಸಹಲ, ವಿದ್ಯಾ ಪ್ರಾರ್ಥನೆ ಗೈದರು ಮತ್ತು ಯೋಗಗೀತೆಯನ್ನು ಹಾಡಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಭವ್ಯ ಸ್ವಾಗತಿಸಿ, ಶ್ರೀಮತಿ ಪವಿತ್ರ ವಂದಿಸಿದರು. ರಾಜ್ಯ ಶಾಸ್ತ್ರ ಉಪನ್ಯಾಸಕ ಶ್ರೀ ಸಂತೋಷ್ ಕುಮಾರ್ ಸಹಕರಿಸಿದರು.ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿ ಆಚರಣೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!