July 23, 2026
ಗ್ರಾಮಾಂತರ ಸುದ್ದಿ

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

ಬೆಳ್ತಂಗಡಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ಸಂಘಟನಾ ಸಂಚಾಲಕರಾಗಿದ್ದ
ಚಂದು ಎಲ್ ರವರ
ಪ್ರಥಮ ವರ್ಷದ ಪುಣ್ಯ ಸ್ಮರಣೆಯು ಜೂ22ರಂದು ಬೆಳ್ತಂಗಡಿಯ
ಶ್ರೀ ನಾರಾಯಣಗುರು ಸಭಾ ಭವನದಲ್ಲಿ ನೆರವೇರಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ತಾಲೂಕು ಪ್ರಧಾನ ಸಂಚಾಲಕ ರಮೇಶ್ ಆರ್ ಅಧ್ಯಕ್ಷತೆವಹಿಸಿದ್ದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಮಲ್ಲೇಶ್ ಅಂಬುಗ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಚಂದು ಎಲ್ ಅವರ ಒಡನಾಟದ ದಿನಗಳನ್ನು ಸ್ಮರಿಸಿಕೊಂಡು ಚಂದು ಅವರ ಅಭಿಮಾನಿಗಳಾಗಬೇಡಿ ಅನುಯಾಯಿಗಳಾಗಿ ಎಂದು ತಿಳಿಸಿದರು.
ಮಾಜಿ ಸಂಚಾಲಕ ಕೆ.ನೇಮಿರಾಜ್ ಕಿಲ್ಲೂರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ದಿ.ಚಂದು ಎಲ್ ಅವರ ಸಂಘಟನಾ ಚತುರತೆ, ನೇರ ನಡೆನುಡಿಯ ನಿಷ್ಠುರ ವ್ಯಕ್ತಿತ್ವದ ಬಗ್ಗೆ ನೆನಪಿಸಿಕೊಂಡು ಅವರ ಸಂಘಟನಾ ಚತುರತೆ ಕಾರ್ಯಕರ್ತರಿಗೆ ಸ್ಫೂರ್ತಿಯಾಗಲಿ ಎಂದು ಆಶಿಸಿದರು.

ಮೈಸೂರು ವಿಭಾಗೀಯ ಸಂಚಾಲಕ ಬಿ.ಕೆ. ವಸಂತ್ ,
ತಾಲೂಕು ದಲಿತ ಮಹಿಳಾ ಒಕ್ಕೂಟದ ಮಾಜಿ ಸಂಚಾಲಕಿ ಕವಿತಾ ಕುಮಾರಿ
ಮಾಜಿ ಸಂಚಾಲಕ ವೆಂಕಣ್ಣ ಕೊಯ್ಯೂರು ಮಾತನಾಡಿ ಒಡನಾಟದ ದಿನಗಳನ್ನು ನೆನಪಿಸಿಕೊಂಡರು.
ಈ ಸಂದರ್ಭ ವೇದಿಕೆಯಲ್ಲಿ ಚಂದು ಎಲ್ ರವರ ಪತ್ನಿ ಅಪ್ಪಿಲತಾ ಉಪಸ್ಥಿತರಿದ್ದರು.

ಮಾಜಿ ಜಿ.ಪಂ ಸದಸ್ಯ , ದಸಂಸ ಮುಖಂಡ ಶೇಖರ್ ಕುಕ್ಕೇಡಿ , ಸಂಜೀವ ಆರ್ , ಚೆನ್ನಕೇಶವ , ಮುಖಂಡರಾದ ಸೇಸಪ್ಪ ನಲಿಕೆ , ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ್ ಶಾಂತಿಕೋಡಿ , ಕೂಸ ಅಳದಂಗಡಿ, ನಾರಾಯಣ ಪುದುವೆಟ್ಟು, ಯುವ ಉದ್ಯಮಿ ಪ್ರಶಾಂತ್ , ಸಾಮಾಜಿಕ ಕಾರ್ಯಕರ್ತ ಶೇಖರ್ ಎಲ್ ಮತ್ತಿತರರು ಇದ್ದರು.
ಮುಖಂಡರಾದ ಶ್ರೀಧರ ಕಳೆಂಜ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!