22.9 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜು :ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕೊಯ್ಯೂರು
“ಮಾನಸಿಕ ಮತ್ತು ದೈಹಿಕ ದೃಢ ತೆಯನ್ನು ಕಾಯ್ದುಕೊಳ್ಳಲು ಯೋಗ ಅತ್ಯಂತ ಅವಶ್ಯಕವಾದುದು ” ಎಂಬುದಾಗಿ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶ್ರೀ ರಾಧಾಕೃಷ್ಣ ತಚ್ಛಮೆ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನ ದ ಉದ್ಘಾಟನೆಗೈದು ಯೋಗವನ್ನು ವಿದ್ಯಾರ್ಥಿಗಳು ನಿತ್ಯ ಜೀವನ ದಲ್ಲಿ ನಿರಂತರ ವಾಗಿ ನಡೆಸಿದಾಗ ರೋಗಮುಕ್ತ ಸಮಾಜದ ನಿರ್ಮಾಣ ಮಾಡಲು ಸಾಧ್ಯ ವಾಗುತ್ತದೆ ಎಂದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರವೀಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಯೋಗ ತರಬೇತುದಾರರಾದ ಎಸ್ ಡಿ ಎಂ ಪ್ರಕೃತಿ ಮತ್ತು ಯೋಗವಿಜ್ಞಾನ ಕಾಲೇಜ್ ನ ಅಭಿಜ್ಞ ವಿ. ಎಂ. ವಿದ್ಯಾರ್ಥಿಗಳಿಗೆ ಯೋಗಾ ಭ್ಯಾಸವನ್ನು ನಡೆಸಿ ಕೊಟ್ಟರು .ಕಾಲೇಜ್ ನ ಎಲ್ಲಾ ವಿದ್ಯಾರ್ಥಿಗಳು ಯೋಗ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಾದ ವಿನಯ, ವಂಶಿಕ, ಐಶ್ವರ್ಯ, ಚಿರಸ್ವಿ, ಸೌಜನ್ಯ, ಫಾತಿಮತ್ ಸಹಲ, ವಿದ್ಯಾ ಪ್ರಾರ್ಥನೆ ಗೈದರು ಮತ್ತು ಯೋಗಗೀತೆಯನ್ನು ಹಾಡಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಭವ್ಯ ಸ್ವಾಗತಿಸಿ, ಶ್ರೀಮತಿ ಪವಿತ್ರ ವಂದಿಸಿದರು. ರಾಜ್ಯ ಶಾಸ್ತ್ರ ಉಪನ್ಯಾಸಕ ಶ್ರೀ ಸಂತೋಷ್ ಕುಮಾರ್ ಸಹಕರಿಸಿದರು.ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಗಾರಕ್ಕೆ ಚಾಲನೆ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya
error: Content is protected !!