26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

ಬೆಳ್ತಂಗಡಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ಸಂಘಟನಾ ಸಂಚಾಲಕರಾಗಿದ್ದ
ಚಂದು ಎಲ್ ರವರ
ಪ್ರಥಮ ವರ್ಷದ ಪುಣ್ಯ ಸ್ಮರಣೆಯು ಜೂ22ರಂದು ಬೆಳ್ತಂಗಡಿಯ
ಶ್ರೀ ನಾರಾಯಣಗುರು ಸಭಾ ಭವನದಲ್ಲಿ ನೆರವೇರಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ತಾಲೂಕು ಪ್ರಧಾನ ಸಂಚಾಲಕ ರಮೇಶ್ ಆರ್ ಅಧ್ಯಕ್ಷತೆವಹಿಸಿದ್ದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಮಲ್ಲೇಶ್ ಅಂಬುಗ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಚಂದು ಎಲ್ ಅವರ ಒಡನಾಟದ ದಿನಗಳನ್ನು ಸ್ಮರಿಸಿಕೊಂಡು ಚಂದು ಅವರ ಅಭಿಮಾನಿಗಳಾಗಬೇಡಿ ಅನುಯಾಯಿಗಳಾಗಿ ಎಂದು ತಿಳಿಸಿದರು.
ಮಾಜಿ ಸಂಚಾಲಕ ಕೆ.ನೇಮಿರಾಜ್ ಕಿಲ್ಲೂರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ದಿ.ಚಂದು ಎಲ್ ಅವರ ಸಂಘಟನಾ ಚತುರತೆ, ನೇರ ನಡೆನುಡಿಯ ನಿಷ್ಠುರ ವ್ಯಕ್ತಿತ್ವದ ಬಗ್ಗೆ ನೆನಪಿಸಿಕೊಂಡು ಅವರ ಸಂಘಟನಾ ಚತುರತೆ ಕಾರ್ಯಕರ್ತರಿಗೆ ಸ್ಫೂರ್ತಿಯಾಗಲಿ ಎಂದು ಆಶಿಸಿದರು.

ಮೈಸೂರು ವಿಭಾಗೀಯ ಸಂಚಾಲಕ ಬಿ.ಕೆ. ವಸಂತ್ ,
ತಾಲೂಕು ದಲಿತ ಮಹಿಳಾ ಒಕ್ಕೂಟದ ಮಾಜಿ ಸಂಚಾಲಕಿ ಕವಿತಾ ಕುಮಾರಿ
ಮಾಜಿ ಸಂಚಾಲಕ ವೆಂಕಣ್ಣ ಕೊಯ್ಯೂರು ಮಾತನಾಡಿ ಒಡನಾಟದ ದಿನಗಳನ್ನು ನೆನಪಿಸಿಕೊಂಡರು.
ಈ ಸಂದರ್ಭ ವೇದಿಕೆಯಲ್ಲಿ ಚಂದು ಎಲ್ ರವರ ಪತ್ನಿ ಅಪ್ಪಿಲತಾ ಉಪಸ್ಥಿತರಿದ್ದರು.

ಮಾಜಿ ಜಿ.ಪಂ ಸದಸ್ಯ , ದಸಂಸ ಮುಖಂಡ ಶೇಖರ್ ಕುಕ್ಕೇಡಿ , ಸಂಜೀವ ಆರ್ , ಚೆನ್ನಕೇಶವ , ಮುಖಂಡರಾದ ಸೇಸಪ್ಪ ನಲಿಕೆ , ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ್ ಶಾಂತಿಕೋಡಿ , ಕೂಸ ಅಳದಂಗಡಿ, ನಾರಾಯಣ ಪುದುವೆಟ್ಟು, ಯುವ ಉದ್ಯಮಿ ಪ್ರಶಾಂತ್ , ಸಾಮಾಜಿಕ ಕಾರ್ಯಕರ್ತ ಶೇಖರ್ ಎಲ್ ಮತ್ತಿತರರು ಇದ್ದರು.
ಮುಖಂಡರಾದ ಶ್ರೀಧರ ಕಳೆಂಜ ಕಾರ್ಯಕ್ರಮ ನಿರೂಪಿಸಿದರು.

Related posts

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya
error: Content is protected !!