July 23, 2026
Uncategorized

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಆರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ನ ನಿಕಟ ಪೂರ್ವ ಅಧ್ಯಕ್ಷ ರಾದ ರಾಜಶೇಖರ ಕೋಟ್ಯಾನ್ ವಹಿಸಿದ್ದರು. ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಗಾಗಿ ಖರೀದಿಸಿದ ಜಾಗದಲ್ಲಿ ಬಿಲ್ಲವ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ನಿರ್ಣಯಿಸಲಾಯಿತು.

ಸಭೆಯಲ್ಲಿ ಟ್ರಸ್ಟಿಗಳಾದ ಚಿತ್ತರಂಜನ್ ಕಂಕನಾಡಿ, ಪೀತಾಂಬರ ಹೆರಾಜೆ, ಜಯಂತ್ ನಡುಬೈಲ್,ರವಿಪೂಜಾರಿ ಚಿಲಿಂಬಿ, ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಶೈಲೇಂದ್ರ ವೈ ಸುವರ್ಣ, ಕ್ಷೇತ್ರಾಡಳಿತ ಸಮಿತಿಯ ಪ್ರಮುಖರಾದ ಡಾ. ರಾಜಾರಾಮ್,ಪ್ರಮಲ್ ಕುಮಾರ್, ಜಯವಿಕ್ರಂ, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ, ಸಂತೋಷ್ ಕುಮಾರ್, ಜಯರಾಮ ಬಂಗೇರ, ಉಮೇಶ್ ಬಂಗೇರ, ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya
error: Content is protected !!