Uncategorized

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಗಂಡಿಬಾಗಿಲು: ಇಲ್ಲಿಯ ಸಿಯೋನ್ ಆಶ್ರಮದಲ್ಲಿ ಜೂ.ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಜುನೈಡ್ ದಂತವೈದ್ಯರು, ಡಾ.ರಯಾನ್, ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

200ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಯೆನೆಪೋಯ ಸಂಸ್ಥೆಯ ಸಮಾಜ ಸೇವಕರಾದ ಭರತ್ ಮತ್ತು ದಿವ್ಯರವರು, ಸಂಸ್ಥೆಯ ವೈದ್ಯರಾದ ಡಾ.ಶಿವಾನಂದಸ್ವಾಮಿಯವರು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಸಿಂಧು ವಿ.ಎಂ.ಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya
error: Content is protected !!