23.5 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜು :ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕೊಯ್ಯೂರು
“ಮಾನಸಿಕ ಮತ್ತು ದೈಹಿಕ ದೃಢ ತೆಯನ್ನು ಕಾಯ್ದುಕೊಳ್ಳಲು ಯೋಗ ಅತ್ಯಂತ ಅವಶ್ಯಕವಾದುದು ” ಎಂಬುದಾಗಿ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶ್ರೀ ರಾಧಾಕೃಷ್ಣ ತಚ್ಛಮೆ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನ ದ ಉದ್ಘಾಟನೆಗೈದು ಯೋಗವನ್ನು ವಿದ್ಯಾರ್ಥಿಗಳು ನಿತ್ಯ ಜೀವನ ದಲ್ಲಿ ನಿರಂತರ ವಾಗಿ ನಡೆಸಿದಾಗ ರೋಗಮುಕ್ತ ಸಮಾಜದ ನಿರ್ಮಾಣ ಮಾಡಲು ಸಾಧ್ಯ ವಾಗುತ್ತದೆ ಎಂದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರವೀಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಯೋಗ ತರಬೇತುದಾರರಾದ ಎಸ್ ಡಿ ಎಂ ಪ್ರಕೃತಿ ಮತ್ತು ಯೋಗವಿಜ್ಞಾನ ಕಾಲೇಜ್ ನ ಅಭಿಜ್ಞ ವಿ. ಎಂ. ವಿದ್ಯಾರ್ಥಿಗಳಿಗೆ ಯೋಗಾ ಭ್ಯಾಸವನ್ನು ನಡೆಸಿ ಕೊಟ್ಟರು .ಕಾಲೇಜ್ ನ ಎಲ್ಲಾ ವಿದ್ಯಾರ್ಥಿಗಳು ಯೋಗ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಾದ ವಿನಯ, ವಂಶಿಕ, ಐಶ್ವರ್ಯ, ಚಿರಸ್ವಿ, ಸೌಜನ್ಯ, ಫಾತಿಮತ್ ಸಹಲ, ವಿದ್ಯಾ ಪ್ರಾರ್ಥನೆ ಗೈದರು ಮತ್ತು ಯೋಗಗೀತೆಯನ್ನು ಹಾಡಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಭವ್ಯ ಸ್ವಾಗತಿಸಿ, ಶ್ರೀಮತಿ ಪವಿತ್ರ ವಂದಿಸಿದರು. ರಾಜ್ಯ ಶಾಸ್ತ್ರ ಉಪನ್ಯಾಸಕ ಶ್ರೀ ಸಂತೋಷ್ ಕುಮಾರ್ ಸಹಕರಿಸಿದರು.ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!