July 23, 2026
ಶಾಲಾ ಕಾಲೇಜು

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜು :ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕೊಯ್ಯೂರು
“ಮಾನಸಿಕ ಮತ್ತು ದೈಹಿಕ ದೃಢ ತೆಯನ್ನು ಕಾಯ್ದುಕೊಳ್ಳಲು ಯೋಗ ಅತ್ಯಂತ ಅವಶ್ಯಕವಾದುದು ” ಎಂಬುದಾಗಿ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶ್ರೀ ರಾಧಾಕೃಷ್ಣ ತಚ್ಛಮೆ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನ ದ ಉದ್ಘಾಟನೆಗೈದು ಯೋಗವನ್ನು ವಿದ್ಯಾರ್ಥಿಗಳು ನಿತ್ಯ ಜೀವನ ದಲ್ಲಿ ನಿರಂತರ ವಾಗಿ ನಡೆಸಿದಾಗ ರೋಗಮುಕ್ತ ಸಮಾಜದ ನಿರ್ಮಾಣ ಮಾಡಲು ಸಾಧ್ಯ ವಾಗುತ್ತದೆ ಎಂದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರವೀಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಯೋಗ ತರಬೇತುದಾರರಾದ ಎಸ್ ಡಿ ಎಂ ಪ್ರಕೃತಿ ಮತ್ತು ಯೋಗವಿಜ್ಞಾನ ಕಾಲೇಜ್ ನ ಅಭಿಜ್ಞ ವಿ. ಎಂ. ವಿದ್ಯಾರ್ಥಿಗಳಿಗೆ ಯೋಗಾ ಭ್ಯಾಸವನ್ನು ನಡೆಸಿ ಕೊಟ್ಟರು .ಕಾಲೇಜ್ ನ ಎಲ್ಲಾ ವಿದ್ಯಾರ್ಥಿಗಳು ಯೋಗ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಾದ ವಿನಯ, ವಂಶಿಕ, ಐಶ್ವರ್ಯ, ಚಿರಸ್ವಿ, ಸೌಜನ್ಯ, ಫಾತಿಮತ್ ಸಹಲ, ವಿದ್ಯಾ ಪ್ರಾರ್ಥನೆ ಗೈದರು ಮತ್ತು ಯೋಗಗೀತೆಯನ್ನು ಹಾಡಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಭವ್ಯ ಸ್ವಾಗತಿಸಿ, ಶ್ರೀಮತಿ ಪವಿತ್ರ ವಂದಿಸಿದರು. ರಾಜ್ಯ ಶಾಸ್ತ್ರ ಉಪನ್ಯಾಸಕ ಶ್ರೀ ಸಂತೋಷ್ ಕುಮಾರ್ ಸಹಕರಿಸಿದರು.ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Related posts

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ನಡುಜಾರು ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!