27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಆರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ನ ನಿಕಟ ಪೂರ್ವ ಅಧ್ಯಕ್ಷ ರಾದ ರಾಜಶೇಖರ ಕೋಟ್ಯಾನ್ ವಹಿಸಿದ್ದರು. ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಗಾಗಿ ಖರೀದಿಸಿದ ಜಾಗದಲ್ಲಿ ಬಿಲ್ಲವ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ನಿರ್ಣಯಿಸಲಾಯಿತು.

ಸಭೆಯಲ್ಲಿ ಟ್ರಸ್ಟಿಗಳಾದ ಚಿತ್ತರಂಜನ್ ಕಂಕನಾಡಿ, ಪೀತಾಂಬರ ಹೆರಾಜೆ, ಜಯಂತ್ ನಡುಬೈಲ್,ರವಿಪೂಜಾರಿ ಚಿಲಿಂಬಿ, ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಶೈಲೇಂದ್ರ ವೈ ಸುವರ್ಣ, ಕ್ಷೇತ್ರಾಡಳಿತ ಸಮಿತಿಯ ಪ್ರಮುಖರಾದ ಡಾ. ರಾಜಾರಾಮ್,ಪ್ರಮಲ್ ಕುಮಾರ್, ಜಯವಿಕ್ರಂ, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ, ಸಂತೋಷ್ ಕುಮಾರ್, ಜಯರಾಮ ಬಂಗೇರ, ಉಮೇಶ್ ಬಂಗೇರ, ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

Related posts

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya
error: Content is protected !!