25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಆರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ನ ನಿಕಟ ಪೂರ್ವ ಅಧ್ಯಕ್ಷ ರಾದ ರಾಜಶೇಖರ ಕೋಟ್ಯಾನ್ ವಹಿಸಿದ್ದರು. ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಗಾಗಿ ಖರೀದಿಸಿದ ಜಾಗದಲ್ಲಿ ಬಿಲ್ಲವ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ನಿರ್ಣಯಿಸಲಾಯಿತು.

ಸಭೆಯಲ್ಲಿ ಟ್ರಸ್ಟಿಗಳಾದ ಚಿತ್ತರಂಜನ್ ಕಂಕನಾಡಿ, ಪೀತಾಂಬರ ಹೆರಾಜೆ, ಜಯಂತ್ ನಡುಬೈಲ್,ರವಿಪೂಜಾರಿ ಚಿಲಿಂಬಿ, ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಶೈಲೇಂದ್ರ ವೈ ಸುವರ್ಣ, ಕ್ಷೇತ್ರಾಡಳಿತ ಸಮಿತಿಯ ಪ್ರಮುಖರಾದ ಡಾ. ರಾಜಾರಾಮ್,ಪ್ರಮಲ್ ಕುಮಾರ್, ಜಯವಿಕ್ರಂ, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ, ಸಂತೋಷ್ ಕುಮಾರ್, ಜಯರಾಮ ಬಂಗೇರ, ಉಮೇಶ್ ಬಂಗೇರ, ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya
error: Content is protected !!