Uncategorized

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಗಂಡಿಬಾಗಿಲು: ಇಲ್ಲಿಯ ಸಿಯೋನ್ ಆಶ್ರಮದಲ್ಲಿ ಜೂ.ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಜುನೈಡ್ ದಂತವೈದ್ಯರು, ಡಾ.ರಯಾನ್, ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

200ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಯೆನೆಪೋಯ ಸಂಸ್ಥೆಯ ಸಮಾಜ ಸೇವಕರಾದ ಭರತ್ ಮತ್ತು ದಿವ್ಯರವರು, ಸಂಸ್ಥೆಯ ವೈದ್ಯರಾದ ಡಾ.ಶಿವಾನಂದಸ್ವಾಮಿಯವರು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಸಿಂಧು ವಿ.ಎಂ.ಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya
error: Content is protected !!