July 23, 2026
ಅಭಿನಂದನೆ

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ


ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.


ಲಯನ್ಸ್ ದ್ವಿತೀಯ ರಾಜ್ಯಪಾಲರಾದ ಗೋವರ್ಧನ್ ಕೆ ಶೆಟ್ಟಿ ಪ್ರಶಾಂತ್ ಶೆಟ್ಟಿ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿ. ಪದಾಧಿಕಾರಿಗಳಿಗೆ ತಮ್ಮ ತಮ್ಮ ಜವಾಬ್ದಾರಿಯನ್ನು ತಿಳಿಸಿದರು. ವೇದಿಕೆಯಲ್ಲಿ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ರಾಜು ಶೆಟ್ಟಿ. ಪ್ರಾಂತ್ಯ ಅಧ್ಯಕ್ಷ ವೆಂಕಟೇಶ ಹೆಬ್ಬಾರ್. ವಲಯಾಧ್ಯಕ್ಷರಾದ ಉಮೇಶ್ ಶೆಟ್ಟಿ. ನಿಕಟ್ಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ


ಸುಲ್ಕೇರಿ ಲಯನ್ಸ್ ಕ್ಲಬ್ಬಿನ ಕೋಶಾಧಿಕಾರಿ ಶುಭಾಕರ ಪೂಜಾರಿ . ಬೆಳ್ತಂಗಡಿ ಕ್ಲಬ್ಬಿನ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಮೂಡಬಿದ್ರೆ ಕ್ಲಬ್ಬಿನ ಅಧ್ಯಕ್ಷರಾದ ಬೊನವೆಂಚರ್ ಮಿನೆಜಸ್. ಕೈ ಕಂಬ ಕ್ಲಬ್ಬಿನ ಅಧ್ಯಕ್ಷರಾದ ಮಹೇಶ್ ಕುಮಾರ್. ಬಪ್ಪನಾಡು ಕ್ಲಬ್ಬಿನ ಅಧ್ಯಕ್ಷರಾದ ಶಿವಪ್ರಸಾದ್. ವೇಣೂರು ಕ್ಲಬ್ಬಿನ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿದ್ದರು. ವಸಂತ ರಾವ್ ನಿರೂಪಿಸಿ ನೂತನ ಕಾರ್ಯದರ್ಶಿ ಸುರೇಶ್ ಭಟ್ ವಂದಿಸಿದರು.
ಸನ್ಮಾನ : ಅತಿ ಹೆಚ್ಚು ಅಂಕಗಳಿಸಿದ ಪಿಯುಸಿ ಹಾಗೂ ಎಸ್ ಎಲ್ ಎಲ್.ಸಿ ವಿದ್ಯಾರ್ಥಿಗಳಿಗೆ
3ಮಂದಿಗೆ ಸನ್ಮಾನಿಸಲಾಯಿತು.
ಸೇವಾ ಚಟುವಟಿಕೆ : ಚಿಕಿತ್ಸೆಗೆ ವೈದ್ಯಕೀಯ ನೆರವು 3 ಮಂದಿಗೆ ನೀಡಲಾಯಿತು ಹೊಸ ಸದಸ್ಯರನ್ನು ಸೇರಿಸಲಾಯಿತು.

Related posts

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

Suddi Udaya

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya
error: Content is protected !!