25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

ಉಜಿರೆ: ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಟೌನ್ ಮದ್ರಸ ಹಾಲ್ ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ. 20 ರಂದು ನಡೆಯಿತು.


ಉಜಿರೆ ರೀಜನಲ್ ವ್ಯಾಪ್ತಿಯ ಮೊಹಲ್ಲಾ ಗಳಿಂದ ಆಯ್ದು ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಾಗೂ ಮದ್ರಸಾ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ಕಲಿಸಿದ ಮುಅಲ್ಲಿಮರನ್ನು ರೀಜನಲ್ ವತಿಯಿಂದ ಅಭಿನಂದಿಸಲಾಯಿತು.


ಎಸ್.ಜೆ.ಎಮ್ ಉಜಿರೆ ರೇಂಜ್ ಅಧ್ಯಕ್ಷ ರಫೀಕ್ ಮದನಿ ಹಳೆಪೇಟೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೀಜನಲ್ ಅಧ್ಯಕ್ಷ ಅಬೂಬಕ್ಕರ್ ಸಮಡೈನ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ರೀಜನಲ್ ಕೋಶಾಧಿಕಾರಿ ಹೈದರ್ ಮದನಿ ಎಸ್.ಎಮ್.ಎ. ರಾಜ್ಯ ನಾಯಕರಾದ ಸ್ವಾದಿಖ್ ಮಾಸ್ಟರ್, ಇಬ್ರಾಹಿಂ ಸಖಾಫಿ ಕಬಕ, ಝೋನಲ್ ಪ್ರಧಾನ ಕಾರ್ಯದರ್ಶಿ ಹಮೀದ್ ಸಅದಿ, ಕೋಶಾಧಿಕಾರಿ ಅಬ್ದುಲ್ಲಾ ಮಲೆಬೆಟ್ಟು, ಎಸ್.ಜೆ.ಎಮ್ ಉಜಿರೆ ರೇಂಜ್ , ಪ್ರಧಾನ ಕಾರ್ಯದರ್ಶಿ ಹಾಫಿಝ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ನಾವೂರು, ಕೋಶಾಧಿಕಾರಿ ಫಾರೂಖ್ ಸಅದಿ ಪದ್ಮುಂಜ ಹಾಗೂ ಇತರ ರೀಜನಲ್ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ರೀಜನಲ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ಹನೀಫಿ ನಚ್ಚಬೆಟ್ಟು ಸ್ವಾಗತಿಸಿ, ವಂದಿಸಿದರು.

Related posts

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya
error: Content is protected !!