22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಕಲ್ಪತರು ನರ್ಸಿಂಗ್ ಸ್ಕೂಲ್ ಜೂ.23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ಮಾತನಾಡಿ “ನೀವು ಇಂದು ಈ ದೀಪವನ್ನು ಹೊತ್ತಿರುವಷ್ಟೆ ಅಲ್ಲ, ರೋಗಿಗಳಿಗಾಗಿ ಪ್ರೀತಿಯ ದೀಪವನ್ನೂ ಬೆಳಗಿಸಲು ಕರೆಹೊಂದಿದವರು. ಈ ಸೇವೆಗೆ ಸಮರ್ಪಿತ ಮನಸ್ಸು ಅತ್ಯಗತ್ಯ. ಈ ದೀಪ ನಿಮ್ಮ ಜೀವನದ ದಿಕ್ಕನ್ನು ತೋರಿಸುವ ಬೆಳಕು ಆಗಲಿ” ಎಂದು ಆಶೀರ್ವದಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ , ಇತರ ಗಣ್ಯರು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯರು ವಿದ್ಯೆಯ ದೀಪ ಬೆಳಗಿಸಿ ನರ್ಸಿಂಗ್ ಸೇವೆಗೆ ತಮ್ಮ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ವಿದ್ಯಾರ್ಥಿಗಳಿಗೆ ಪೋಷಕರು, ಬಂಧುಮಿತ್ರರು ಹಾಗೂ ಶಿಕ್ಷಕರು ಹಾರೈಕೆ ಸಲ್ಲಿಸಿದರು. ಕಲ್ಪತರು ನರ್ಸಿಂಗ್ ಸ್ಕೂಲಿನ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಿಕಾರವರು ಪ್ರತಿಜ್ಞೆಯನ್ನು ಹೇಳಿಕೊಟ್ಟರು.

Related posts

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya
error: Content is protected !!