September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಕಲ್ಪತರು ನರ್ಸಿಂಗ್ ಸ್ಕೂಲ್ ಜೂ.23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ಮಾತನಾಡಿ “ನೀವು ಇಂದು ಈ ದೀಪವನ್ನು ಹೊತ್ತಿರುವಷ್ಟೆ ಅಲ್ಲ, ರೋಗಿಗಳಿಗಾಗಿ ಪ್ರೀತಿಯ ದೀಪವನ್ನೂ ಬೆಳಗಿಸಲು ಕರೆಹೊಂದಿದವರು. ಈ ಸೇವೆಗೆ ಸಮರ್ಪಿತ ಮನಸ್ಸು ಅತ್ಯಗತ್ಯ. ಈ ದೀಪ ನಿಮ್ಮ ಜೀವನದ ದಿಕ್ಕನ್ನು ತೋರಿಸುವ ಬೆಳಕು ಆಗಲಿ” ಎಂದು ಆಶೀರ್ವದಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ , ಇತರ ಗಣ್ಯರು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯರು ವಿದ್ಯೆಯ ದೀಪ ಬೆಳಗಿಸಿ ನರ್ಸಿಂಗ್ ಸೇವೆಗೆ ತಮ್ಮ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ವಿದ್ಯಾರ್ಥಿಗಳಿಗೆ ಪೋಷಕರು, ಬಂಧುಮಿತ್ರರು ಹಾಗೂ ಶಿಕ್ಷಕರು ಹಾರೈಕೆ ಸಲ್ಲಿಸಿದರು. ಕಲ್ಪತರು ನರ್ಸಿಂಗ್ ಸ್ಕೂಲಿನ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಿಕಾರವರು ಪ್ರತಿಜ್ಞೆಯನ್ನು ಹೇಳಿಕೊಟ್ಟರು.

Related posts

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya
error: Content is protected !!