September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಡಿರುದ್ಯಾವರ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಡಿರುದ್ಯಾವರ ಬಿಜೆಪಿ ಘಟಕದಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಸೂರಜ್ ವಳಂಬ್ರ ಪ್ರಾಸ್ತವಿಕವಾಗಿ ಮಾತನಾಡಿದರು. ಅಶೋಕ್ ಕುಮಾರ್ ರವರು ರಾಜ್ಯ ಸರಕಾರದ 9/11 ನಕ್ಷೆಗೆ ಮೂಡದಿಂದ ಅನುಮತಿ ಪಡೆಯ ಆದೇಶ ಮಾಡಿದ್ದು ಅದರಿಂದ ಜನರಿಗಾಗುವ ತೊಂದರೆ ಬಗ್ಗೆ, ಕಟ್ಟಡ ಸಂಖ್ಯೆ ಇದ್ದರು ವಿದ್ಯುತ್ ಸಂಪರ್ಕ ಪಡೆಯಲು ವಾಸಯೋಗ್ಯ ಪ್ರಮಾಣ ಪತ್ರದ ಆದೇಶದ ಬಗ್ಗೆ, ನೋಂದಾವಣೆ ಶುಲ್ಕವನ್ನು. 2% ದಿಂದ 10% ಮಾಡಿರುವ ಬಗ್ಗೆ ಹಾಗೂ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿ ಆಕ್ರೋಶವನ್ನು ವ್ಯಕ್ತಪಡಿಸಿ ತಕ್ಷಣ ಜನವಿರೋಧಿ ಆದೇಶಗಳನ್ನು ವಾಪಾಸ್ ಪಡೆಯುವಂತೆ ಹೇಳಿದರು. ತಪ್ಪಿದರೆ ಮುಂದೆ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷೆ ರತ್ನಾವತಿ, ಉಪಾಧ್ಯಕ್ಷೆ ಸಾವಿತ್ರಿ , ಪಂಚಾಯತ್ ಸದಸ್ಯರು ರಾಜೇಶ್, ಹಿರಿಯರಾದ ಪ್ರಭಾಕರ ಶೆಣೈ, ಪ್ರಶಾಂತ್ ಅಂತರ, ರೇಣುಕಾ ರಮೇಶ್, ಹೇಮಾವತಿ, ರಾಮಚಂದ್ರ ಜನಾರ್ದನ ಕಾನರ್ಪ, ಸಿ ಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ ಬರಮೇಲು, ಪ್ರಮುಖ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದರು.

Related posts

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಲಾಯಿಲದಲ್ಲಿ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ಕಾಳಿಕಾಂಬಾ, ವರಮಹಾಲಕ್ಷ್ಮೀ ಪೂಜೆ: ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya
error: Content is protected !!